ಸಾಂದರ್ಭಿಕ ಚಿತ್ರ 
ದೇಶ

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ

ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ನವದೆಹಲಿ: ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ದೆಹಲಿ, ರಾಜಸ್ಥಾನ, ಹರ್ಯಾಣ, ಪಂಜಾಬ್, ಮತ್ತು ಉತ್ತರ ಪ್ರದೇಶದ ಅನೇಕ ಕಡೆಗಳಲ್ಲಿ ಕೆಲವು ದಿನಗಳಿಂದ  45 ಡಿಗ್ರಿ ಸೆಲ್ಸಿಯಸ್ ನಷ್ಟ ಉಷ್ಣಾಂಶ ದಾಖಲಾಗುತ್ತಿರುವುದರಿಂದ ಜನತೆ ಬಿಸಿ ಗಾಳಿಯಿಂದ ಹೈರಾಣಗಿದ್ದಾರೆ.

ಮೇ 25 ಮತ್ತು 26ರಂದು ಬಿಸಿ ಗಾಳಿ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಉತ್ತರ ಭಾರತಕ್ಕೆ  ಹಳದಿ ಬಣ್ಣದ ಸಂಕೇತದ ಎಚ್ಚರಿಕೆ ನೀಡಿದೆ.

ಪೂರ್ವ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬೀಸುವ ಗಾಳಿಯ ಅಡಚಣೆಯಿಂದಾಗಿ ದೆಹಲಿ, ಹರ್ಯಾಣ ಮತ್ತು ಉತ್ತರ ಪ್ರದೇಶದಲ್ಲಿ ಮೇ 29 ಮತ್ತು 30 ರಂದು ಧೂಳು , ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಹವಾಮಾನ ಇಲಾಖೆ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ. 

ಈ ಅವಧಿಯಲ್ಲಿ ಗಾಳಿ ಗಂಟೆಗೆ 50ರಿಂದ 60 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಇದರಿಂದಾಗಿ ಬಿಸಿಗಾಳಿಯಿಂದಾಗಿ ತುಸು ನೆಮ್ಮದಿ ಸಿಕ್ಕಂತಾಗಲಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT