ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ದೇಶ

ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು! 

ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ಬೆಂಗಳೂರು: ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ದೆಹಲಿಯಿಂದ ಕೆಐಎಎಲ್ ಗೆ ಬಂದಿಳಿದ ವಿಮಾನದಲ್ಲಿ 5 ವರ್ಷದ ಬಾಲಕ ಏಕಾಂಗಿಯಾಗಿ ಬಂದಿರುವುದನ್ನು ಸ್ಥಳೀಯ ಸುದ್ದಿವಾಹಿನಿ ವರದಿ ಮಾಡಿದೆ. 3 ತಿಂಗಳ ಹಿಂದೆ ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಬಾಲಕ ಲಾಕ್ ಡೌನ್ ಹಿನ್ನೆಲೆಯಲ್ಲಿ ದೆಹಲಿಯಲ್ಲೇ ಇರುವಂತಾಗಿತ್ತು. ಈಗ ವಿಮಾನ ಸೌಲಭ್ಯ ಪುನಾರಂಭಗೊಂಡಿರುವುದರಿಂದ  ಬಾಲಕನ ಪೋಷಕರು ಮಗನನ್ನು ವಾಪಸ್ ಕರೆಸಿಕೊಂಡಿದ್ದಾರೆ. 

5 ವರ್ಷದ ಬಾಲಕನನ್ನು ವಾಪಸ್ ಕರೆಸಿಕೊಳ್ಳಲು ಬೆಂಗಳೂರಿನಲ್ಲಿರುವ ಆತನ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಬೇಕೆಂದು ಕೇಳಿದ್ದರು. ಅಧಿಕಾರಿಗಳು ಸ್ಪಂದಿಸಿದ್ದು, ಬಾಲಕನನ್ನು ಏಕಾಂಗಿಯಾಗಿ ವಿಮಾನದಲ್ಲಿ ಕಳಿಸುವುದಕ್ಕೆ ವ್ಯವಸ್ಥೆ ಮಾಡಿದ್ದಾರೆ. 

ದೆಹಲಿಯಲ್ಲಿ ವಿಮಾನ ಬಂದಿಳಿಯುತ್ತಿದ್ದಂತೆಯೇ ಬಾಲಕನನ್ನು ಆತನ ತಾಯಿ ಬಂದು ಕರೆದುಕೊಂಡು ಹೋಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT