ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ದೇಶ

ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು! 

ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ಬೆಂಗಳೂರು: ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ದೆಹಲಿಯಿಂದ ಕೆಐಎಎಲ್ ಗೆ ಬಂದಿಳಿದ ವಿಮಾನದಲ್ಲಿ 5 ವರ್ಷದ ಬಾಲಕ ಏಕಾಂಗಿಯಾಗಿ ಬಂದಿರುವುದನ್ನು ಸ್ಥಳೀಯ ಸುದ್ದಿವಾಹಿನಿ ವರದಿ ಮಾಡಿದೆ. 3 ತಿಂಗಳ ಹಿಂದೆ ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಬಾಲಕ ಲಾಕ್ ಡೌನ್ ಹಿನ್ನೆಲೆಯಲ್ಲಿ ದೆಹಲಿಯಲ್ಲೇ ಇರುವಂತಾಗಿತ್ತು. ಈಗ ವಿಮಾನ ಸೌಲಭ್ಯ ಪುನಾರಂಭಗೊಂಡಿರುವುದರಿಂದ  ಬಾಲಕನ ಪೋಷಕರು ಮಗನನ್ನು ವಾಪಸ್ ಕರೆಸಿಕೊಂಡಿದ್ದಾರೆ. 

5 ವರ್ಷದ ಬಾಲಕನನ್ನು ವಾಪಸ್ ಕರೆಸಿಕೊಳ್ಳಲು ಬೆಂಗಳೂರಿನಲ್ಲಿರುವ ಆತನ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಬೇಕೆಂದು ಕೇಳಿದ್ದರು. ಅಧಿಕಾರಿಗಳು ಸ್ಪಂದಿಸಿದ್ದು, ಬಾಲಕನನ್ನು ಏಕಾಂಗಿಯಾಗಿ ವಿಮಾನದಲ್ಲಿ ಕಳಿಸುವುದಕ್ಕೆ ವ್ಯವಸ್ಥೆ ಮಾಡಿದ್ದಾರೆ. 

ದೆಹಲಿಯಲ್ಲಿ ವಿಮಾನ ಬಂದಿಳಿಯುತ್ತಿದ್ದಂತೆಯೇ ಬಾಲಕನನ್ನು ಆತನ ತಾಯಿ ಬಂದು ಕರೆದುಕೊಂಡು ಹೋಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT