ಭಾರತೀಯರು 
ದೇಶ

ವಿದೇಶದಿಂದ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು ವಾಪಸ್ ಕರೆತರಲು ವಂದೇ ಭಾರತ್ ಮಿಷನ್ ವಿಸ್ತರಣೆ

ಎರಡನೇ ಹಂತದ ವಂದೇ ಭಾರತ್ ಮಿಷನ್ ಅಡಿಯಲ್ಲಿ 60 ರಾಷ್ಟ್ರಗಳಲ್ಲಿ ಸಿಲುಕಿರುವ ಸುಮಾರು 1 ಲಕ್ಷ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ತರಲು ಕೇಂದ್ರಸರ್ಕಾರ ಯೋಜನೆ ಹಾಕಿಕೊಂಡಿದೆ  ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ನವದೆಹಲಿ: ಎರಡನೇ ಹಂತದ ವಂದೇ ಭಾರತ್ ಮಿಷನ್ ಅಡಿಯಲ್ಲಿ 60 ರಾಷ್ಟ್ರಗಳಲ್ಲಿ ಸಿಲುಕಿರುವ ಸುಮಾರು 1 ಲಕ್ಷ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ತರಲು ಕೇಂದ್ರಸರ್ಕಾರ ಯೋಜನೆ ಹಾಕಿಕೊಂಡಿದೆ  ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಎರಡನೇ ಹಂತದ ಮಿಷನ್ ಮೇ 22ಕ್ಕೆ ಅಂತ್ಯವಾಗಿದೆ. ಆದಾಗ್ಯೂ, ಇದನ್ನು ಜೂನ್ 13ರವೆರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.ಈ ಬೃಹತ್ ಸ್ಥಳಾಂತರ ಪ್ರಕ್ರಿಯೆಗಾಗಿ ತೊಡಗಿಸಿಕೊಳ್ಳುವ ಸಚಿವಾಲಯಗಳು ಮತ್ತು ಎಲ್ಲಾ ಏಜೆನ್ಸಿಗಳೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್  ಮಂಗಳವಾರ ಸಭೆ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್ ಗಳನ್ನು ಪ್ರಕಟಿಸಿರುವ ಎಸ್. ಜೈಶಂಕರ್,  ಎರಡನೇ ಹಂತದಲ್ಲಿ 60 ರಾಷ್ಟ್ರಗಳಿಂದ 1 ಲಕ್ಷ ಪ್ರಯಾಣಿಕರನ್ನು ಸ್ವದೇಶಕ್ಕೆ ಕರೆತರುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT