ಸಂಗ್ರಹ ಚಿತ್ರ 
ದೇಶ

49 ಸಿಬ್ಬಂದಿಗಳಿಗೆ ಹರಡಿದ ಕೊರೋನಾ ಸೋಂಕು; ತಮಿಳುನಾಡಿನಲ್ಲಿ ನೋಕಿಯಾ ಫೋನ್‌ ತಯಾರಿಕಾ ಘಟಕ ಸ್ಥಗಿತ

ನೆರೆಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಯಾರಿಕಾ ಘಟಕದಲ್ಲಿನ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ  ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ. 

ಇದೇ ವೇಳೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಘಟಕ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ಕಂಪನಿ ತಿಳಿಸಿದೆ. ಪ್ರಸ್ತುತ ಸಂಸ್ಥೆಯಲ್ಲಿ ಎಷ್ಟು ಸಿಬ್ಬಂದಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ಸಂಸ್ಥೆ ತಿಳಿಸಿಲ್ಲ. ಆದರೆ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು  ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಕೂಡ ಕನಿಷ್ಠ 9 ನೌಕರರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದರಿಂದ ಆ ಘಟಕ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ