Amit Shah 
ದೇಶ

ನಾವು ಕೊರೋನಾ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎನ್ನುವುದಾದರೆ ಅವರೇ ಮಾಡಲಿ: ಅಮಿತ್ ಶಾಗೆ ಮಮತಾ ತಿರುಗೇಟು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ಯುದ್ಧ ಮುಂದುವರಿದಿದೆ. ಕೊರೋನಾ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ವಿಚಾರದಲ್ಲಿ ಆರಂಭದಿಂದಲೂ ಟೀಕೆ ಪ್ರತಿಟೀಕೆಗಳನ್ನು ಎದುರಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಕೋಲ್ಕತ್ತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ಯುದ್ಧ ಮುಂದುವರಿದಿದೆ.
ಕೊರೋನಾ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ವಿಚಾರದಲ್ಲಿ ಆರಂಭದಿಂದಲೂ ಟೀಕೆ ಪ್ರತಿಟೀಕೆಗಳನ್ನು ಎದುರಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ, ಗೃಹ ಸಚಿವ ಅಮಿತ್ ಶಾ ಅವರಿಗೆ ನಮ್ಮ ಸರ್ಕಾರ ಕೊರೋನಾ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಅನ್ನಿಸುವುದಾದರೆ ಅವರೇ ಏಕೆ ಪ್ರಯತ್ನ ಮಾಡಬಾರದು. ವಲಸಿಗರನ್ನು ರೈಲಿನಲ್ಲಿ ಕರೆದುಕೊಂಡು ಬರುವ ವಿಚಾರದಲ್ಲಿ ಕೂಡ ರೈಲ್ವೆ ಸಚಿವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಮಿತ್ ಶಾ ಅವರೇ ನೀವು ಪಶ್ಚಿಮ ಬಂಗಾಳಕ್ಕೆ ಆಗಾಗ ಕೇಂದ್ರ ತಂಡವನ್ನು ಕಳುಹಿಸುತ್ತಿರುತ್ತೀರಿ. ಅದನ್ನೇ ಮುಂದುವರಿಸಿ. ಆದರೆ ನೀವು ಪಶ್ಚಿಮ ಬಂಗಾಳ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅನಿಸುವುದಾದರೆ ನೀವೇ ಏಕೆ ಮಾಡಬಾರದು, ನೀವೇ ಮಾಡಿದರೆ ನನಗೆ ಏನೂ ತೊಂದರೆಯಿಲ್ಲ, ಬೇರೆ ರಾಜ್ಯಗಳಿಂದ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ನಾನು ಕೊರೋನಾ ಹಬ್ಬುವುದಕ್ಕೆ ಏನು ಮಾಡಲು ಸಾಧ್ಯ, ಈ ಪರಿಸ್ಥಿತಿಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ನಿನ್ನೆ ಕೋಲ್ಕತ್ತಾದಲ್ಲಿ ತಿಳಿಸಿದರು.

ಕೇವಲ ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿಯವರು ಪರಸ್ಪರ ದೋಷಾರೋಪ ಮಾಡಿಕೊಂಡಿದ್ದು ಮಾತ್ರವಲ್ಲದೆ ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಪರಸ್ಪರ ಪತ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅವುಗಳಲ್ಲಿ ಒಂದು ಪತ್ರ ಸರ್ಕಾರಕ್ಕೆ ತಲುಪುವ ಮೊದಲೇ ಮಾಧ್ಯಮಕ್ಕೆ ಸಿಕ್ಕಿ ಮಮತಾ ಬ್ಯಾನರ್ಜಿ ಸಿಟ್ಟು, ಆಕ್ರೋಶಗಳನ್ನು ಹೊರಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel