Amit Shah 
ದೇಶ

ನಾವು ಕೊರೋನಾ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎನ್ನುವುದಾದರೆ ಅವರೇ ಮಾಡಲಿ: ಅಮಿತ್ ಶಾಗೆ ಮಮತಾ ತಿರುಗೇಟು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ಯುದ್ಧ ಮುಂದುವರಿದಿದೆ. ಕೊರೋನಾ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ವಿಚಾರದಲ್ಲಿ ಆರಂಭದಿಂದಲೂ ಟೀಕೆ ಪ್ರತಿಟೀಕೆಗಳನ್ನು ಎದುರಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಕೋಲ್ಕತ್ತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ಯುದ್ಧ ಮುಂದುವರಿದಿದೆ.
ಕೊರೋನಾ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ವಿಚಾರದಲ್ಲಿ ಆರಂಭದಿಂದಲೂ ಟೀಕೆ ಪ್ರತಿಟೀಕೆಗಳನ್ನು ಎದುರಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ, ಗೃಹ ಸಚಿವ ಅಮಿತ್ ಶಾ ಅವರಿಗೆ ನಮ್ಮ ಸರ್ಕಾರ ಕೊರೋನಾ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಅನ್ನಿಸುವುದಾದರೆ ಅವರೇ ಏಕೆ ಪ್ರಯತ್ನ ಮಾಡಬಾರದು. ವಲಸಿಗರನ್ನು ರೈಲಿನಲ್ಲಿ ಕರೆದುಕೊಂಡು ಬರುವ ವಿಚಾರದಲ್ಲಿ ಕೂಡ ರೈಲ್ವೆ ಸಚಿವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಮಿತ್ ಶಾ ಅವರೇ ನೀವು ಪಶ್ಚಿಮ ಬಂಗಾಳಕ್ಕೆ ಆಗಾಗ ಕೇಂದ್ರ ತಂಡವನ್ನು ಕಳುಹಿಸುತ್ತಿರುತ್ತೀರಿ. ಅದನ್ನೇ ಮುಂದುವರಿಸಿ. ಆದರೆ ನೀವು ಪಶ್ಚಿಮ ಬಂಗಾಳ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅನಿಸುವುದಾದರೆ ನೀವೇ ಏಕೆ ಮಾಡಬಾರದು, ನೀವೇ ಮಾಡಿದರೆ ನನಗೆ ಏನೂ ತೊಂದರೆಯಿಲ್ಲ, ಬೇರೆ ರಾಜ್ಯಗಳಿಂದ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ನಾನು ಕೊರೋನಾ ಹಬ್ಬುವುದಕ್ಕೆ ಏನು ಮಾಡಲು ಸಾಧ್ಯ, ಈ ಪರಿಸ್ಥಿತಿಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ನಿನ್ನೆ ಕೋಲ್ಕತ್ತಾದಲ್ಲಿ ತಿಳಿಸಿದರು.

ಕೇವಲ ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿಯವರು ಪರಸ್ಪರ ದೋಷಾರೋಪ ಮಾಡಿಕೊಂಡಿದ್ದು ಮಾತ್ರವಲ್ಲದೆ ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಪರಸ್ಪರ ಪತ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅವುಗಳಲ್ಲಿ ಒಂದು ಪತ್ರ ಸರ್ಕಾರಕ್ಕೆ ತಲುಪುವ ಮೊದಲೇ ಮಾಧ್ಯಮಕ್ಕೆ ಸಿಕ್ಕಿ ಮಮತಾ ಬ್ಯಾನರ್ಜಿ ಸಿಟ್ಟು, ಆಕ್ರೋಶಗಳನ್ನು ಹೊರಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT