ಅರ್ಚಕ 
ದೇಶ

ಮಹಾಮಾರಿ ಕೊರೋನಾ ತಡೆಗೆ 52 ವರ್ಷದ ವ್ಯಕ್ತಿಯ ನರಬಲಿ: ಅರ್ಚಕನ ಬಂಧನ!

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ನರಬಲಿ ಪ್ರಕರಣ ಸಂಬಂಧ 70 ವರ್ಷದ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. 

ಕಟಕ್: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ನರಬಲಿ ಪ್ರಕರಣ ಸಂಬಂಧ 70 ವರ್ಷದ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. 

ದೇವಿಯನ್ನು ಸಮಾಧಾನಪಡಿಸಲು ಕಟಕ್ ಜಿಲ್ಲೆಯ ಬಂದಹಹುಡದಲ್ಲಿರುವ ದೇವಾಲಯದೊಳಗೆ ಅರ್ಚಕನೊಬ್ಬ 52 ವರ್ಷದ ವ್ಯಕ್ತಿಯನ್ನು 'ತ್ಯಾಗ' ಹೆಸರಲ್ಲಿ 52 ವರ್ಷದ ವ್ಯಕ್ತಿಯೋರ್ವನನ್ನು ಶಿರಚ್ಛೇನ ಮಾಡಿದ್ದಾರೆ. 

ತ್ಯಾಗವು ಸಾಂಕ್ರಾಮಿಕ ರೋಗದ ಪರಿಣಾಮವನ್ನು ಕಡಿಮೆ ಮಾಡುತ್ತದೆ ಎಂದು ನಂಬಿರುವ ಸಂಸಾರಿ ಓಜಾ (70) ಬುಧವಾರ ರಾತ್ರಿ ಮಾ ಬ್ರಾಹ್ಮಣಿದೈ ದೇವಾಲಯದ ಆವರಣದಲ್ಲಿ ವ್ಯಕ್ತಿಯನ್ನು ಶಿರಚ್ಛೇದ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತನನ್ನು ಅದೇ ಗ್ರಾಮದ ಸರೋಜ್ ಪ್ರಧಾನ್ ಎಂದು ಗುರುತಿಸಲಾಗಿದೆ. ಅವರು ದೇವಾಲಯದ ಸಮೀಪವಿರುವ ತಮ್ಮ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅದರ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆತನ ಮನವೊಲಿಸಿ ದೇವಿಗೆ ಬಲಿ ನೀಡಿದ್ದಾನೆ ಎನ್ನಲಾಗಿದೆ. 

ಘಟನೆ ಬಳಿಕ ಅರ್ಚಕನೇ ಪೊಲೀಸ್ ಠಾಣೆಗೆ ತೆರಳಿ ಘಟನೆ ಸಂಬಂಧ ವಿವರಿಸಿ ಶರಣಾಗಿದ್ದಾರೆ. ನಂತರ ಪೊಲೀಸರು ಅರ್ಚನ ಕೋಣೆಗೆ ತೆರಳಿ ಅಲ್ಲಿದ್ದ ಮೃತನ ದೇಹ ಮತ್ತು ಕೊಡಲಿಯನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!