ವಲಸೆ ಕಾರ್ಮಿಕರು 
ದೇಶ

ವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣ, ಆಹಾರ, ನೀರು ನೀಡಿ: ರೈಲ್ವೆ ಇಲಾಖೆ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

ಕೊರೋನಾ ಲಾಕ್‌ಡೌನ್‌ ಪರಿಣಾಮ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಶ್ರಮಿಕ್ ವಿಶೇಷ ರೈಲುಗಳನ್ನು ಆರಂಭಿಸಿದೆ. ಆದರೆ ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ವಲಸಿಗರ....

ನವದೆಹಲಿ: ಕೊರೋನಾ ಲಾಕ್‌ಡೌನ್‌ ಪರಿಣಾಮ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಶ್ರಮಿಕ್ ವಿಶೇಷ ರೈಲುಗಳನ್ನು ಆರಂಭಿಸಿದೆ. ಆದರೆ ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ವಲಸಿಗರ ಅವ್ಯವಸ್ಥೆ, ಹಸಿವು, ಬಳಲಿಕೆ ಮತ್ತು ಸಾವು ಪುನಾರಾವರ್ತಿತವಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ವಲಸಿಗರಿಗೆ ಮೊದಲು ಆಹಾರ ಮತ್ತು ನೀರು ನೀಡುವಂತೆ ಹಾಗೂ ಅವರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ರೇಲ್ವೆ ಇಲಾಖೆ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಿದೆ.

ವಲಸೆ ಕಾರ್ಮಿಕರ ಅವ್ಯವಸ್ಥೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಪರ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದೆ.

ವಲಸೆ ಕಾರ್ಮಿಕರ ಪ್ರಯಾಣ ದರವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸಬೇಕು. ವಲಸಿಗರಿಗೆ ರೈಲು ಅಥವಾ ಬಸ್ಸುಗಳ ಮೂಲಕ ಪ್ರಯಾಣಕ್ಕೆ ಯಾವುದೇ ಶುಲ್ಕ ವಿಧಿಸಬಾರದು. ಲಾಕ್ ಡೌನ್ ನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ಅವರು ಇರುವ ರಾಜ್ಯಗಳಲ್ಲಿ ಉಚಿತ ಆಹಾರ ಮತ್ತು ನೀರನ್ನು ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದು ಮೊದಲ ಸಮಸ್ಯೆ, ನಂತರ ವಿಶೇಷ ರೈಲಿನಲ್ಲಿ ಪ್ರಯಾಣಿಸುವುದಕ್ಕಾಗಿ ನೋಂದಣಿ ಮಾಡಿಕೊಂಡರೂ ವಾರಗಟ್ಟಲೇ ಕಾಯಬೇಕು. ಈ ಹಂತದಲ್ಲಿ ಇವರ ಬಳಿ ಪ್ರಯಾಣಕ್ಕೆ ಹಣ ಕೇಳಲಾಗುವುದೇ? ಎಲ್ಲರನ್ನೂ ಒಂದೇ ಬಾರಿಗೆ ಸ್ಥಳಾಂತರಲು ಆಗುವುದಿಲ್ಲ. ಆದರೆ ಅವರು ಊರಿಗೆ ತೆರಳಲು ಬಸ್ ಅಥವಾ ರೈಲು ವ್ಯವಸ್ಥೆ ಆಗುವವರೆಗೆ ಅವರಿಗೆ ಆಹಾರ, ನೀರು ಮತ್ತು ವಸತಿ ವ್ಯವಸ್ಥೆಯಾಗಬೇಕು ಎಂದು ಕೋರ್ಟ್ ಹೇಳಿದೆ.

ಪರಿಸ್ಥಿತಿಯನ್ನು "ಅಭೂತಪೂರ್ವ" ಎಂದು ಕರೆದ ಕೇಂದ್ರ ಸರ್ಕಾರ, ಮೇ 1 ರಂದು ವಿಶೇಷ ರೈಲು ಸೇವೆ ಪ್ರಾರಂಭವಾದಾಗಿನಿಂದ ಸುಮಾರು 91 ಲಕ್ಷ ವಲಸಿಗರನ್ನು ಅವರ ರಾಜ್ಯಗಳಿಗೆ ಸಾಗಿಸಲಾಗಿದೆ ಎಂದು ಕೋರ್ಟ್ ಗೆ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT