ಶ್ರಮಿಕ್ ವಿಶೇಷ ರೈಲು 
ದೇಶ

ಉತ್ತರ ಪ್ರದೇಶ: ಶ್ರಮಿಕ್ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆ

ಲಾಕ್ ಡೌನ್ ನಿಂದಾಗಿ ವಿವಿಧ ನಗರಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಶ್ರಮಿಕ್ ವಿಶೇಷ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆಯಾಗಿದ್ದು, ಹಲವು ದಿನಗಳ ಹಿಂದೆಯೇ ಕಾರ್ಮಿಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಲಖನೌ: ಲಾಕ್ ಡೌನ್ ನಿಂದಾಗಿ ವಿವಿಧ ನಗರಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಶ್ರಮಿಕ್ ವಿಶೇಷ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆಯಾಗಿದ್ದು, ಹಲವು ದಿನಗಳ ಹಿಂದೆಯೇ ಕಾರ್ಮಿಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ ರೈಲು ಬೋಗಿಯನ್ನು ಸ್ಯಾನಿಟೈಸ್ ಮಾಡಲು ಬಂದಿದ್ದ ಸ್ವಚ್ಛತಾ ಸಿಬ್ಬಂದಿ ಶವ ಕಂಡು ದಂಗಾಗಿದ್ದಾರೆ.

ಮೃತ ವ್ಯಕ್ತಿ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮೋಹನ್‌ಲಾಲ್ ಶರ್ಮಾ(38) ಎಂದು ಗುರುತಿಸಲಾಗಿದ್ದು,  ಮುಂಬೈನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ನಂತರ ಮರಳಿ ತನ್ನ ತವರು ರಾಜ್ಯ ಉತ್ತರ ಪ್ರದೇಶಕ್ಕೆ ಆಗಮಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಶ್ರಮಿಕ್ ವಿಶೇಷ ರೈಲಿನ ಮೂಲಕ ಝಾನ್ಸಿ ತಲುಪಿದ್ದ ಮನೋಹರ್‌ಲಾಲ್ ಶರ್ಮಾ, ಅಲ್ಲಿಂದ ಬಸ್ತಿಗೆ ಮತ್ತೊಂದು ರೈಲಿನಲ್ಲಿ ಹೊರಡಬೇಕಿತ್ತು. ಆದರೆ ಝಾನ್ಸಿ ರೈಲು ನಿಲ್ದಾಣ ಬರುವುದಕ್ಕೂ ಮುಂಚೆ ಶೌಚಾಲಯಕ್ಕೆ ತೆರಳಿದ್ದಾಗ ಆತ ಮೃತಪಟ್ಟಿದ್ದಾನೆ.

ಶರ್ಮಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ಝಾನ್ಸಿ ಪೊಲೀಸರು ತಿಳಿಸಿದ್ದಾರೆ. 

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಆದರೆ ಶವ ಕೊಳೆತಿರುವುದರಿಂದ ಕೊವಿಡ್-19 ಪರೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT