ವಲಸೆ ಕಾರ್ಮಿಕರು 
ದೇಶ

ಕೊರೋನಾ ಬಿಕ್ಕಟ್ಟು ಉಲ್ಬಣಿಸಿದರೆ ಬಡವರ ಕೈಗೇ ನೇರ ನಗದು!

ದೇಶದಲ್ಲಿ ಮಾರಕ ಕೊರೋನಾ ವೈರಸ್ ಬಿಕ್ಕಟ್ಟು ಉಲ್ಬಣಿಸಿದರೆ ದೇಶದ ಬಡವರ ಕೈಗೇ ನೇರವಾಗಿ ಹಣ ನೀಡುವ ವ್ಯವಸ್ಥೆಯ ಕುರಿತು ಆಲೋಚಿಸಲಾಗುತ್ತದೆ ಎಂದು ಕೇಂದ್ರ ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಬಿಕ್ಕಟ್ಟು ಉಲ್ಬಣಿಸಿದರೆ ದೇಶದ ಬಡವರ ಕೈಗೇ ನೇರವಾಗಿ ಹಣ ನೀಡುವ ವ್ಯವಸ್ಥೆಯ ಕುರಿತು ಆಲೋಚಿಸಲಾಗುತ್ತದೆ ಎಂದು ಕೇಂದ್ರ ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ದೇಶದ ಕೋಟ್ಯಂತರ ಬಡವರು, ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಅಕ್ಷರಶಃ ನಿರಾಶ್ರಿತರಾಗಿದ್ದರು. ಒಪ್ಪೊತ್ತಿನ ಊಟವೂ ಇಲ್ಲದೆ ಕಂಗಾಲಾಗಿದ್ದರು. ಅಲ್ಲದೆ ತಮ್ಮ ತಮ್ಮ ತವರಿಗೆ ತೆರಳಲು ಈಗಲೂ ಹೆಣಗಾಡುತ್ತಿದ್ದಾರೆ.  ಕೋವಿಡ್ 19 ಸಾಂಕ್ರಾಮಿಕ ಲಾಕ್ ಡೌನ್ ನಿಂದಾಗಿ ಸಮಾಜದ ಈ ವರ್ಗ ಬೀದಿಗೆ ಬಿದ್ದಿತ್ತು. ಅವರ ನಿತ್ಯ ಸಂಪಾದನೆ ಸ್ಥಗಿತವಾಗಿತ್ತು. ಕುಟುಂಬ ಪೋಷಣೆ ಕಷ್ಟಕರವಾಗಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರೆ ಈ ಆರ್ಥಿಕ ಪ್ಯಾಕೇಜ್  ಸಂಪೂರ್ಣವಾಗಿ ಸಂತ್ರಸ್ಥರ ಕೈ ಗೆ ತಲುಪುತ್ತಿಲ್ಲ. 

ಹೀಗಾಗಿ ಕೇಂದ್ರ ವಿತ್ತ ಸಚಿವಾಲಯ ದೇಶದ ಬಡವರ ಕೈಗೇ ನೇರವಾಗಿ ಹಣ ನೀಡುವ ವ್ಯವಸ್ಥೆಯ ಕುರಿತು ಆಲೋಚಿಸುತ್ತಿದೆ ಎನ್ನಲಾಗಿದೆ. ವಿತ್ತ ಸಚಿವಾಲಯದ ಮೂಲಗಳು ತಿಳಿಸಿರುವಂತೆ ಕೇಂದ್ರ ವಿತ್ತ ಸಚಿವಾಲಯ ಕಾರ್ಮಿಕ ಸಚಿವಾಲಯದಿಂದ ಲಾಕ್ ಡೌನ್ ಸಂದರ್ಭದಲ್ಲಿ  ಉಂಟಾದ ಉದ್ಯೋಗ ನಷ್ಟ ಮತ್ತು ವೇತನ ಕಡಿತದ ದತ್ತಾಂಶ ಕೇಳಿದೆ. ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಮುದ್ರಣಗೊಂಡ ನೋಟುಗಳನ್ನು ಚಲಾವಣೆಗೆ ತರುವ ಚಿಂತನೆಯಲ್ಲಿ ತೊಡಗಿದೆ ಎಂದು ಮಾಹಿತಿ ನೀಡಿವೆ. ಬಹುಶಃ ಕೇಂದ್ರ ಸರ್ಕಾರ ಕೊರೋನಾ ವೈರಸ್ ಉಲ್ಫಣವಾದಾಗ  ನೇರವಾಗಿ ಬಡವರ ಕೈಗೇ ನಗದು ಹಂಚುವ ಕುರಿತು ಚಿಂತನೆಯಲ್ಲಿ ತೊಡಗಿರಬಹುದು ಎಂದು ಹೇಳಲಾಗುತ್ತಿದೆ.

ಚೀನಾ ಹೂಡಿಕೆದಾರರಿಗೆ ಯಾವುದೇ ನಿರ್ಬಂಧವಿಲ್ಲ
ಇದೇ ವೇಳೆ ವಿತ್ತ ಸಚಿವಾಲಯ ಚೀನಾ ಮೂಲದ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಲು ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT