ಮೋದಿ-ಅಮಿತ್ ಶಾ 
ದೇಶ

ಲಾಕ್ ಡೌನ್ ಮುಂದುವರಿಕೆ ಕುರಿತು ಸಿಎಂ ಗಳ ಅಭಿಪ್ರಾಯವನ್ನು ಪ್ರಧಾನಿ ಮೋದಿಗೆ ತಿಳಿಸಿದ ಅಮಿತ್ ಶಾ

ಮೇ.31 ರ ನಂತರವೂ ಲಾಕ್ ಡೌನ್ ನ್ನು ಮುಂದುವರಿಸಬೇಕೆ? ಎಂಬ ಬಗ್ಗೆ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. 

ನವದೆಹಲಿ: ಮೇ.31 ರ ನಂತರವೂ ಲಾಕ್ ಡೌನ್ ನ್ನು ಮುಂದುವರಿಸಬೇಕೆ? ಎಂಬ ಬಗ್ಗೆ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. 

ದೂರವಾಣಿ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಮಾತುಕತೆ ನಡೆಸಿದ್ದು, ಲಾಕ್ ಡೌನ್ ಮುಂದುವರಿಕೆ ಸಂಬಂಧ ಸಂಗ್ರಹಿಸಿರುವ ಅಭಿಪ್ರಾಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲುಪಿಸಿದ್ದಾರೆ. 

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ತಡೆಗೆ ರಾಷ್ಟ್ರಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ್ದರು. ಈ ಲಾಕ್ ಡೌನ್ ಮೇ.31 ವರೆಗೂ ನಾಲ್ಕು ಭಾಗಗಳಲ್ಲಿ ಮುಂದುವರೆದಿದೆ. 

ಮೇ.31ಕ್ಕೆ 4.0 ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲಿದ್ದು, ಇದಕ್ಕೂ 3 ದಿನಗಳ ಮುನ್ನ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಜೂ.1 ರಿಂದ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಬೇಕಾದ ವಲಯಗಳು, ಆತಂಕ ಇರುವ ಕ್ಷೇತ್ರಗಳ ಬಗ್ಗೆ ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿರುವ ಅಮಿತ್ ಶಾ ಈ ಕುರಿತ ವರದಿಯನ್ನು ತಲುಪಿಸಿದ್ದಾರೆ. 

ಈ ಹಿಂದೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರೇ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದರು. ಈ ಬಾರಿ ಅಮಿತ್ ಶಾ ಸಭೆ ನಡೆಸಿ ಚರ್ಚಿಸುವುದು ಅಚ್ಚರಿಗೆ ಕಾರಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT