ಸಂಗ್ರಹ ಚಿತ್ರ 
ದೇಶ

ಶ್ರಮಿಕ್ ರೈಲುಗಳಲ್ಲಿ 80 ವಲಸೆ ಕಾರ್ಮಿಕರ ಸಾವು: ರೈಲ್ವೇ ಇಲಾಖೆ 

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಅತಂತ್ರರಾಗಿದ್ದ ವಲಸೆ ಕಾರ್ಮಿಕರನ್ನು ಅವರವರ ತವರಿಗೆ ತಲುಪಿಸಲು ಕೇಂದ್ರ ಸರ್ಕಾರ ಬಿಟ್ಟಿದ್ದ ಶ್ರಮಿಕ್ ರೈಲಿನಲ್ಲಿ ಈ ವರೆಗೂ 80 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಅತಂತ್ರರಾಗಿದ್ದ ವಲಸೆ ಕಾರ್ಮಿಕರನ್ನು ಅವರವರ ತವರಿಗೆ ತಲುಪಿಸಲು ಕೇಂದ್ರ ಸರ್ಕಾರ ಬಿಟ್ಟಿದ್ದ ಶ್ರಮಿಕ್ ರೈಲಿನಲ್ಲಿ ಈ ವರೆಗೂ 80 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಈ ಬಗ್ಗೆ ರೈಲ್ವೆ ಸುರಕ್ಷಾ ಪಡೆ  ಮಾಹಿತಿ ನೀಡಿದ್ದು, ದೇಶದ ವಿವಿಧೆಡೆ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು ತವರು ಗ್ರಾಮಗಳಿಗೆ ಮರಳಲು ಅನುಕೂಲ ಕಲ್ಪಿಸುವ ಸಲುವಾಗಿ ಮೇ 9ರಿಂದ ಮೇ 29ರವರೆಗೆ ಶ್ರಮಿಕ್ ರೈಲುಗಳಲ್ಲಿ ಪ್ರಯಾಣದ ವೇಳೆ ಒಟ್ಟು 80 ವಲಸೆ ಕಾರ್ಮಿಕರು  ಮೃತಪಟ್ಟಿದ್ದಾರೆ ಎಂದು ಹೇಳಿದೆ.

ಈ ಶ್ರಮಿಕ್ ರೈಲು ಸೇವೆಯನ್ನು ಮೇ ಒಂದರಿಂದ ಆರಂಭಿಸಲಾಗಿತ್ತು, ಮೇ 27ರವರೆಗೆ ಒಟ್ಟು 3,840 ರೈಲುಗಳು ಸುಮಾರು 50 ಲಕ್ಷ ವಲಸೆ ಕಾರ್ಮಿಕರು ಪ್ರಯಾಣ ಮಾಡಿದ್ದಾರೆ. ಈ ಪೈಕಿ 80 ಮಂದಿ ಪ್ರಯಾಣಿಕರು ವಿವಿಧ ಕಾರಣಗಳಿಂದಾಗಿ ಸಾವನ್ನಪ್ಪಿದ್ದು, ಬುಧವಾರ ಒಂದೇ ದಿನ  ವಿವಿಧ ರಾಜ್ಯಗಳಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಆದರೆ ಮೃತಪಟ್ಟವರ ಪೈಕಿ ಬಹುತೇಕ ಮಂದಿ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

ಇಲಾಖೆ ನೀಡಿರುವ ಮಾಹಿತಿ ಅನ್ವಯ ಮೇ27ರಂದು 10 ಮಂದಿ ಸಾವನ್ನಪ್ಪಿದ್ದರೆ, ಮೇ 24 ಮತ್ತು 25ರಂದು ತಲಾ 9 ಮಂದಿ ಸಾವನ್ನಪ್ಪಿದ್ದಾರೆ, ಮೇ 26ರಂದು 13 ಮಂದಿ ಮತ್ತು ಮೇ 27ರಂದು 8 ಮಂದಿ ಸಾವನ್ನಪ್ಪಿದ್ದಾರೆ.

ರೈಲಿನಲ್ಲಿ ಉಸಿರುಗಟ್ಟಿ, ಉಷ್ಣಾಂಶ ಹಾಗೂ ಹಸಿವಿನಿಂದ ಮೃತಪಟ್ಟಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯೆಯಾಗಿ ಆರ್‌ಪಿಎಫ್ ಈ ಹೇಳಿಕೆ ನೀಡಿದ್ದು, ಹಲವು ಮಂದಿ ವೈದ್ಯಕೀಯ ಚಿಕಿತ್ಸೆಗಾಗಿಯೇ ನಗರಗಳಿಗೆ ಬಂದಿದ್ದವರು ಎಂದೂ ಇಲಾಖೆ ಸಮರ್ಥಿಸಿಕೊಂಡಿದೆ. ಅಂತೆಯೇ ರಾಜ್ಯಗಳ  ಜತೆ ಸಮನ್ವಯದೊಂದಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT