ಸಂಗ್ರಹ ಚಿತ್ರ 
ದೇಶ

ಅಂಫಾನ್ ಬಳಿಕ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ: ಜೂನ್ 3ಕ್ಕೆ ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರುವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರುವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.

ಹೌದು... ಮುಂದಿನ ಎರಡು ಮೂರು ದಿನಗಳಲ್ಲಿ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಜೂನ್ 3ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಮುಂಬೈ  ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರವು ಚಂಡಮಾರುತದ ಬೆಳವಣಿಗೆಗಳ ಮತ್ತು ತೀವ್ರತೆ ಮೇಲೆ ನಿಗಾ ಇರಿಸಿದೆ.

ಆಗ್ನೇಯ, ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದು ಜೂನ್ 3ರ ವೇಳೆಗೆ ಚಂಡಮಾರುತ ಉತ್ತರ ಮಹಾರಾಷ್ಟ್ರ ಮತ್ತು  ಗುಜರಾತ್ ಕರಾವಳಿಗೆ ಅಪ್ಪಳಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT