ಗುಣಮುಖರಾದ ಕೊರೋನಾ ಸೋಂಕಿತರು 
ದೇಶ

ಕೊರೋನಾಘಾತದ ನಡುವೆಯೇ ಸಮಾಧಾನದ ಸಂಗತಿ; 24 ಗಂಟೆಗಳಲ್ಲಿ ದೇಶದಲ್ಲಿ 11,264 ಸೋಂಕಿತರು ಗುಣಮುಖ

ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಅತ್ತ ದೆಹಲಿಯಿಂದ ಸಮಾಧಾನದ ಸಂಗತಿಯೊಂದು ಬಂದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಅತ್ತ ದೆಹಲಿಯಿಂದ ಸಮಾಧಾನದ ಸಂಗತಿಯೊಂದು ಬಂದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಕೋವಿಡ್-19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದು ಒಂದು ದಿನದಲ್ಲಿ ಅತಿ ಹೆಚ್ಚು ಚೇತರಿಸಿಕೊಂಡ ರೋಗಿಗಳ ಪ್ರಮಾಣ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.  ಅಂತೆಯೇ ಆ ಮೂಲಕ ದೇಶದಲ್ಲಿ ಚೇತರಿಕೆಯ ದರ ಗಣನೀಯ ಪ್ರಮಾಣದಲ್ಲಿ ಸುಧಾರಣೆಯಾಗಿದ್ದು, ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ 47.40 ರಷ್ಟು ಎನ್ನಲಾಗಿದೆ. 

ಈ ಹಿಂದಿನ ದಿನದ ಚೇತರಿಕೆ ದರಕ್ಕಿಂತ ಶೇ 4.51 ರಷ್ಟು ಹೆಚ್ಚಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟು ಗುಣಮುಖರಾದ ಕೋವಿಡ್ -19 ಸೋಂಕಿತರ ಸಂಖ್ಯೆ ಈಗ 82,369 ಆಗಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯ ಚೇತರಿಸಿಕೊಂಡ ರೋಗಿಗಳ ಕಾರಣದಿಂದಾಗಿ, ಸಕ್ರಿಯ ರೋಗಿಗಳ ಸಂಖ್ಯೆ ಮೇ  29 ರಂದು 89,987 ರೋಗಿಗಳಿಂದ 86,422 ಸಕ್ರಿಯ ಪ್ರಕರಣಗಳಿಗೆ ಇಳಿದಿದೆ. ಎಲ್ಲಾ ಸಕ್ರಿಯ ಪ್ರಕರಣಗಳು ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿವೆ ಎಂದು ಸಚಿವಾಲಯ ತಿಳಿಸಿದೆ.

ಕೋವಿಡ್ -19 ರ ದ್ವಿಗುಣಗೊಳಿಸುವ ಸಮಯದ ವಿವರಗಳನ್ನು ನೀಡಿದ ಸಚಿವಾಲಯವು ಕಳೆದ 14 ದಿನಗಳಲ್ಲಿ 13.3 ರಿಂದ ಕಳೆದ ಮೂರು ದಿನಗಳಲ್ಲಿ 15.4 ಕ್ಕೆ ಏರಿದ್ದು.  ಕೋವಿಡ್-19ರ ಸಾವಿನ ಪ್ರಮಾಣ ಶೇ 2.86ಕ್ಕೆ ಕುಸಿದಿದೆ. ಇದು ವಿಶ್ವದ ಯಾವುದೇ ರಾಷ್ಟ್ರಗಳಿಗಿಂತ  ಅತ್ಯಂತ ಕೆಳಮಟ್ಟದಲ್ಲಿದೆ. 2020 ರ ಮೇ 29 ರ ಹೊತ್ತಿಗೆ, ಐಸಿಯುನಲ್ಲಿ ಶೇ 2.55 ಸಕ್ರಿಯ ಸೋಂಕಿತರು, ವೆಂಟಿಲೇಟರ್‌ಗಳಲ್ಲಿ ಶೇ 0.48 ಮತ್ತು ಆಮ್ಲಜನಕದ ಸಹಾಯದ ಮೇಲೆ  ಶೇ 1.96 ರಷ್ಟು ರೋಗಿಗಳಿದ್ದಾರೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT