ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢದ ದಾಂತೇವಾಡದಲ್ಲಿ 27 ನಕ್ಸಲೀಯರು ಶರಣಾಗತಿ

ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲೀಯರಿಗೆ  ಪುನವರ್ಸತಿಗಾಗಿ ಈ ವರ್ಷದ ಜೂನ್ ತಿಂಗಳಲ್ಲಿ ಜಿಲ್ಲಾ ಪೊಲೀಸರಿಂದ ನಿಮ್ಮ ಮನೆ, ಹಳ್ಳಿಗೆ ಹಿಂತಿರುಗಿ ಪ್ರಚಾರವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಈವರೆಗೂ 177 ಕ್ರಾಂತಿಕಾರಿಗಳು ಶರಣಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆರು ಮಹಿಳೆಯರು ಸೇರಿದಂತೆ 27 ನಕ್ಸಲೀಯರು ಜಿಲ್ಲೆಯ ಬರ್ಸೂರು ಠಾಣೆಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್ ಪಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ದಾಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

ಇತ್ತೀಚಿಗೆ ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು ಹಿಂಸೆ ತ್ಯಜಿಸುವಂತೆ ಸ್ಥಳೀಯ ಪೊಲೀಸರು ನಡೆಸುತ್ತಿರುವ ಆಂದೋಲನದಿಂದ ಸ್ಪೋರ್ತಿಗೊಂಡು ಶರಣಾಗಿರುವುದಾಗಿ ನಕ್ಸಲೀಯರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT