ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢದ ದಾಂತೇವಾಡದಲ್ಲಿ 27 ನಕ್ಸಲೀಯರು ಶರಣಾಗತಿ

ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲೀಯರಿಗೆ  ಪುನವರ್ಸತಿಗಾಗಿ ಈ ವರ್ಷದ ಜೂನ್ ತಿಂಗಳಲ್ಲಿ ಜಿಲ್ಲಾ ಪೊಲೀಸರಿಂದ ನಿಮ್ಮ ಮನೆ, ಹಳ್ಳಿಗೆ ಹಿಂತಿರುಗಿ ಪ್ರಚಾರವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಈವರೆಗೂ 177 ಕ್ರಾಂತಿಕಾರಿಗಳು ಶರಣಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆರು ಮಹಿಳೆಯರು ಸೇರಿದಂತೆ 27 ನಕ್ಸಲೀಯರು ಜಿಲ್ಲೆಯ ಬರ್ಸೂರು ಠಾಣೆಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್ ಪಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ದಾಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

ಇತ್ತೀಚಿಗೆ ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು ಹಿಂಸೆ ತ್ಯಜಿಸುವಂತೆ ಸ್ಥಳೀಯ ಪೊಲೀಸರು ನಡೆಸುತ್ತಿರುವ ಆಂದೋಲನದಿಂದ ಸ್ಪೋರ್ತಿಗೊಂಡು ಶರಣಾಗಿರುವುದಾಗಿ ನಕ್ಸಲೀಯರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT