ಬಿಹಾರದ ಛಪ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ 
ದೇಶ

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆ, ಮತ್ತೊಂದೆಡೆ ಇಬ್ಬರು ಯುವರಾಜ ಇದ್ದಾರೆ,ಅವರಲ್ಲಿ ಒಬ್ಬರು ಜಂಗಲ್ ರಾಜ್

ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು ಅದರಲ್ಲಿ ನಿತೀಶ್ ಕುಮಾರ್ ಅವರೇ ಈ ಬಾರಿ ಕೂಡ ಸರ್ಕಾರ ರಚಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಛಪ್ರ(ಬಿಹಾರ): ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು ಅದರಲ್ಲಿ ನಿತೀಶ್ ಕುಮಾರ್ ಅವರೇ ಈ ಬಾರಿ ಕೂಡ ಸರ್ಕಾರ ರಚಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಬಿಹಾರದಲ್ಲಿ ಪ್ರಧಾನಿ ಮೋದಿಯವರು ನಾಲ್ಕು ರ್ಯಾಲಿಗಳಲ್ಲಿ ಭಾಗವಹಿಸಿ ಮಾತನಾಡಲಿದ್ದು ಮೊದಲ ಭಾಗವಾಗಿ ಛಪ್ರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಇಂದು ಬಿಹಾರದಲ್ಲಿ ಡಬಲ್ ಎಂಜಿನ್ ನ ಸರ್ಕಾರವಿದೆ, ಇನ್ನೊಂದೆಡೆ ಇಬ್ಬರು ಯುವರಾಜರಿದ್ದು ಅವರಲ್ಲಿ ಒಬ್ಬರು ಜಂಗಲ್ ರಾಜನ ಯುವರಾಜ ಕೂಡ ಇದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ರಾಜ್ಯದ ಪ್ರಗತಿಗೆ ಬದ್ಧವಾಗಿದ್ದರೆ, ಎದುರುಗಡೆಯ ಇಬ್ಬರು ಯುವರಾಜರು ತಮ್ಮ ತಮ್ಮ ಸಿಂಹಾಸನವನ್ನು ಭದ್ರಪಡಿಸಿಕೊಳ್ಳಲು ತಮ್ಮಲ್ಲೇ ಜಗಳವಾಡುತ್ತಿದ್ದಾರೆ ಎಂದು ಅಣಕಿಸಿದರು.

ಮಹಾಘಟಬಂಧನ ಮೈತ್ರಿಕೂಟದಲ್ಲಿ ಇಬ್ಬರು ಯುವರಾಜರಿದ್ದಾರೆ. ಒಬ್ಬರು ಕುಟುಂಬ ರಾಜಕಾರಣದ ಪರಂಪರೆಯಿಂದ ಬಂದಿದ್ದರೆ, ಮತ್ತೊಬ್ಬರು ಜಂಗಲ್ ರಾಜ್ ಆಡಳಿತದ ಪರಂಪರೆಯಿಂದ ಬಂದಿದ್ದಾರೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೆಣಕಿದರು.

ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾತ್ರ ಬಿಹಾರ ರಾಜ್ಯ ಅಭಿವೃದ್ಧಿ ಸಾಧ್ಯ, ಮಹಾಘಟಬಂಧನ ಅಧಿಕಾರಕ್ಕೆ ಬಂದರೆ ರಾಜ್ಯ ಜಂಗಲ್ ರಾಜ್ಯವಾಗಲಿದೆ ಎಂದರು.

ಹಬ್ಬ ಆಚರಿಸುವುದು ಹೇಗೆಂಬ ಚಿಂತೆ ಬೇಡ: ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಖುಷಿಯಾಗುವ ವಿಚಾರವನ್ನು ಪ್ರಧಾನಿಯವರು ಹಂಚಿಕೊಂಡಿದ್ದು, ದೀಪಾವಳಿ, ಛತ್ ಪೂಜೆಯವರೆಗೆ ಕೇಂದ್ರ ಸರ್ಕಾರ ಉಚಿತ ಆಹಾರ ಧಾನ್ಯಗಳನ್ನು ಬಡವರಿಗೆ ವಿತರಿಸುತ್ತಿದ್ದು, ಹಬ್ಬಗಳನ್ನು ಹೇಗೆ ಆಚರಿಸುವುದೆಂಬ ಚಿಂತೆ ತಾಯಂದಿರು, ಸಹೋದರಿಯರಿಗೆ ಬೇಡ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ