ಭಾರತ-ಪಾಕಿಸ್ತಾನದ ರಾಷ್ಟ್ರ ಧ್ವಜಗಳು 
ದೇಶ

ಗಿಲ್ಗಿಟ್-ಬಾಲ್ಟಿಸ್ತಾನ್ ವಿಚಾರದಲ್ಲಿ ಪಾಕ್ ನಡೆಯನ್ನು ಖಂಡಿಸಿದ ಭಾರತ 

ತನ್ನ ಅಕ್ರಮ ಕೆಲಸವನ್ನು ಮರೆಮಾಚುವ ಉದ್ದೇಶದಿಂದ ಪಾಕಿಸ್ತಾನ, ಗಿಲ್ಗಿಟ್- ಬಾಲ್ಟಿಸ್ತಾನ್ ನ್ನು ತನ್ನ ಐದನೇ ಪ್ರಾಂತ್ಯ ಎಂದು ಘೋಷಿಸಿದೆ. ಆದರೆ, ಅಲ್ಲಿನ ಜನರು ಏಳು ದಶಕಗಳಿಂದಲೂ ಎದುರಿಸುತ್ತಿರುವ  ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ, ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ನವದೆಹಲಿ: ತನ್ನ ಅಕ್ರಮ ಕೆಲಸವನ್ನು ಮರೆಮಾಚುವ ಉದ್ದೇಶದಿಂದ ಪಾಕಿಸ್ತಾನ, ಗಿಲ್ಗಿಟ್- ಬಾಲ್ಟಿಸ್ತಾನ್ ನ್ನು ತನ್ನ ಐದನೇ ಪ್ರಾಂತ್ಯ ಎಂದು ಘೋಷಿಸಿದೆ. ಆದರೆ, ಅಲ್ಲಿನ ಜನರು ಏಳು ದಶಕಗಳಿಂದಲೂ ಎದುರಿಸುತ್ತಿರುವ  ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ, ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇಂದು ಮಧ್ಯಾಹ್ನ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ತಾತ್ಕಾಲಿಕ ಪ್ರಾಂತೀಯ ಸ್ಥಾನಮಾನವನ್ನು ಘೋಷಿಸುತ್ತಿದ್ದಂತೆ  ಅದರ ಅಕ್ರಮ ಕೆಲಸ ನಡೆಯುತ್ತಿರುವ ಎಲ್ಲಾ ಪ್ರದೇಶಗಳನ್ನು  ತಕ್ಷಣ ಖಾಲಿ ಮಾಡುವಂತೆ ನಾವು ಕರೆ ನೀಡಿರುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಗಿಲ್ಗಿಟ್- ಬಾಲಿಸ್ಟಾನ್  ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ. ಆದರೆ, 1947 ಪಾಕಿಸ್ತಾನ ಇಬ್ಬಾಗವಾದ ನಂತರ ಅಕ್ರಮವಾಗಿ ಅದನ್ನು ವಶಪಡಿಸಿಕೊಂಡಿದೆ.ನಂತರ ಅದನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್ -ಬಾಲ್ಟಿಸ್ತಾನ್  ಎಂದು ಪಾಕಿಸ್ತಾನ ಪ್ರತ್ಯೇಕಿಸಿದೆ.

ಗಿಲ್ಗಿಟ್- ಬಾಲ್ಟಿಸ್ತಾನ್   ಎಂದು ಕರೆಯಲ್ಪಡುವ ಪ್ರದೇಶ ಸೇರಿದಂತೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ, ಲಡಾಖ್, ಕಾನೂನು ಪ್ರಕಾರ ಭಾರತದ ಭಾಗವಾಗಿವೆ. 1947ರಲ್ಲಿ ಜಮ್ಮು-ಕಾಶ್ಮೀರವನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಈ ಭಾರತೀಯ ಪ್ರಾಂತ್ಯಗಳ ಸ್ಥಿತಿಯನ್ನು ಬದಲಿಸಲು ಪ್ರಯತ್ನಿಸುವ ಬದಲು, ಪಾಕಿಸ್ತಾನ  ತನ್ನ ಅಕ್ರಮ ಕೆಲಸ ಮಾಡುತ್ತಿರುವ ಎಲ್ಲಾ ಪ್ರದೇಶಗಳನ್ನು ಕೂಡಲೇ ಖಾಲಿ ಮಾಡುವಂತೆ ನಾವು ಕರೆ ನೀಡುವುದಾಗಿ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರುವಂತೆ ಮಾಡಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT