ಭಾರತ-ಚೀನಾ ಸೈನಿಕರ ಸಾಂದರ್ಭಿಕ ಚಿತ್ರ 
ದೇಶ

ಭಾರತ-ಚೀನಾ ಸಂಬಂಧ ತೀವ್ರ ಒತ್ತಡದಲ್ಲಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಭಾರತ ಮತ್ತು ಚೀನಾ ಮಧ್ಯೆ ಸಂಬಂಧ ತೀವ್ರ ಒತ್ತಡದಲ್ಲಿದ್ದು, ಶಾಂತಿ ಪುನರ್ ಸ್ಥಾಪನೆಗೆ ಎರಡೂ ದೇಶಗಳ ಮಧ್ಯೆ ಕಳೆದ ಕೆಲ ವರ್ಷಗಳಲ್ಲಿ ಮಾಡಿಕೊಂಡಿರುವ ಒಪ್ಪಂದವನ್ನು ಸೂಕ್ಷ್ಮವಾಗಿ ಪರಸ್ಪರ ಗೌರವಿಸಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ನವದೆಹಲಿ: ಭಾರತ ಮತ್ತು ಚೀನಾ ಮಧ್ಯೆ ಸಂಬಂಧ ತೀವ್ರ ಒತ್ತಡದಲ್ಲಿದ್ದು, ಶಾಂತಿ ಪುನರ್ ಸ್ಥಾಪನೆಗೆ ಎರಡೂ ದೇಶಗಳ ಮಧ್ಯೆ ಕಳೆದ ಕೆಲ ವರ್ಷಗಳಲ್ಲಿ ಮಾಡಿಕೊಂಡಿರುವ ಒಪ್ಪಂದವನ್ನು ಸೂಕ್ಷ್ಮವಾಗಿ ಪರಸ್ಪರ ಗೌರವಿಸಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಅವರು ನಿನ್ನೆ ರಾಷ್ಟ್ರೀಯ ಏಕತೆ ದಿನ ಪ್ರಯುಕ್ತ ಸರ್ದಾರ್ ವಲ್ಲಭಬಾಯಿ ಪಟೇಲ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ-ಚೀನಾ ಗಡಿಭಾಗದಲ್ಲಿ ಗಡಿ ವಾಸ್ತವ ರೇಖೆಯಲ್ಲಿನ ಯಥಾಸ್ಥಿತಿಯನ್ನು ಬದಲಾಯಿಸಲು ಯತ್ನಿಸಿದರೆ ಅದನ್ನು ಭಾರತ ಖಂಡಿತಾ ಒಪ್ಪುವುದಿಲ್ಲ ಎಂದರು.

ಆಕಾಶವಾಣಿಯಲ್ಲಿ ಜೈಶಂಕರ್ ಅವರ ಉಪನ್ಯಾಸ ನಿನ್ನೆ ಬಿತ್ತರವಾಗಿದ್ದು, ಅದರಲ್ಲಿ ಗಡಿನಿಯಂತ್ರಣ ರೇಖೆಯಲ್ಲಿ ಭಯೋತ್ಪಾದನೆ ಬಗ್ಗೆ ಕೂಡ ಉಲ್ಲೇಖಿಸಿದ್ದು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಎಂದಿಗೂ ಭಾರತ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಚೀನಾ ವಿಷಯವನ್ನು ತೆಗೆದುಕೊಂಡರೆ ಮೂರು ದಶಕಗಳವರೆಗೆ ಪರಿಸ್ಥಿತಿ ಸ್ಥಿರವಾಗಿತ್ತು, ಎರಡೂ ದೇಶಗಳು ಸಾಂಪ್ರದಾಯಿಕ ಸವಾಲುಗಳು ಮತ್ತು ಹೊಸ ಪರಿಸ್ಥಿತಿಗಳನ್ನು ಎದುರಿಸುತ್ತಿದೆ ಎಂದರು.

ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ವಿಸ್ತೃತ ಸಹಕಾರಕ್ಕೆ ಆಧಾರವಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವು ಕಾಣಿಸಿಕೊಂಡು ಅದು ಇಡೀ ವಿಶ್ವಕ್ಕೆ ಪಸರಿಸುತ್ತಿದ್ದಂತೆ ಸಂಬಂಧವು ತೀವ್ರ ಒತ್ತಡಕ್ಕೆ ಒಳಗಾಗಿದೆ ಎಂದು ಸಚಿವರು ಹೇಳಿದರು.
ಪೂರ್ವ ಲಡಾಕ್ ನಲ್ಲಿ ಭಾರತ ಮತ್ತು ಚೀನಾ ದೇಶಗಳ ಸೇನೆಗಳು ಸಂಘರ್ಷದಲ್ಲಿ ನಿರತವಾಗಿದ್ದು ಎರಡೂ ಕಡೆಯ ಸೈನಿಕರು ಸಾವು ನೋವು ಕಂಡಿದ್ದಾರೆ. ನಂತರ ಹಲವು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆದರೂ ಸಹ ಸಮಸ್ಯೆ ಮಾತ್ರ ಬಗೆಹರಿದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT