ಸಂಸತ್ 
ದೇಶ

ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ 

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ನವದೆಹಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

 ಮತ್ತೊಂದೆಡೆ  242 ಸದಸ್ಯ ಬಲದ ಮೇಲ್ಮನೆಯಲ್ಲಿ  ಅನೇಕ ವರ್ಷಗಳಿಂದಲೂ ಪ್ರಾಬಲ್ಯ ಹೊಂದಿದ್ದ ಕಾಂಗ್ರೆಸ್, ಎರಡು ಸ್ಥಾನಗಳನ್ನು ಕಳೆದುಕೊಳ್ಳುವ ಮೂಲಕ  ಕೇವಲ 38 ಸ್ಥಾನಗಳನ್ನು ಹೊಂದುವಂತಾಗಿದೆ. 

11 ರಾಜ್ಯಸಭಾ ಸ್ಥಾನಗಳಿಗೆ  ನಡೆದ ಚುನಾವಣೆಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಪುರಿ ಸೇರಿದಂತೆ 9 ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ  ಪಕ್ಷ 92 ಸದಸ್ಯರನ್ನು ಹೊಂದಿದಂತಾಗಿದೆ. ಮೂವರು ಅಭ್ಯರ್ಥಿಗಳು ಮರು ಆಯ್ಕೆಯಾಗಿದ್ದು, ಅದರ ಲಾಭವೂ ದೊರೆತಿದೆ. ಎನ್ ಡಿಎ ಅಂಗಪಕ್ಷ ಜೆಡಿಯು ಐದು ಸ್ಥಾನಗಳನ್ನು ಪಡೆದುಕೊಂಡಿದೆ.

ಎನ್ ಡಿಎ ಸಂಖ್ಯಾಬಲ ಇದೀಗ 104ಕ್ಕೆ ಏರಿಕೆಯಾಗಿದ್ದು, ನಾಲ್ವರು ನಾಮನಿರ್ದೇಶಿತ ಸದಸ್ಯರ ಬೆಂಬಲವನ್ನು ಕೂಡಾ ಪಡೆಯಬಹುದಾಗಿದೆ.242 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 121 ಸ್ಥಾನಗಳ ಅಗತ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT