ಪ್ರಧಾನಿ ನರೇಂದ್ರ ಮೋದಿ 
ದೇಶ

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಕಾಬೂಲ್:  ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಕಾಬೂಲ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇರಾನಿ ರಾಯಭಾರಿ ಕೂಡಾ ಪಾಲ್ಗೊಂಡಿರುವಂತೆಯೇ ಉಗ್ರರು ಗುಂಡಿನ ಮಳೆ ಗರೆದಿದ್ದಾರೆ. ಉಗ್ರರ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿನ ಹೇಡಿತನದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡ ಕುಟುಂಬದವರಿಗೆ ಪ್ರಾರ್ಥಿಸುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT