ಸಾಂದರ್ಭಿಕ ಚಿತ್ರ 
ದೇಶ

ಮಥುರಾ: ಈದ್ಗಾ ಮೈದಾನದಲ್ಲಿ  ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ

 ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

ಮಥುರಾ: ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

18ರಿಂದ 25 ವರ್ಷದೊಳಗಿನ ಯುವಕರು ಗೋವರ್ಧನ್-ಬರ್ಸಾನ್ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಹಿಂದೂ ಪ್ರಾರ್ಥನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಶಾಂತಿಗೆ ಭಂಗ ತಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. 

ಸೌರಬ್ ನಂಬಾರ್ದಾರ್, ರಾಘವ್ ಮಿತ್ತಲ್, ರೌಕಿ ಮತ್ತು ಖನ್ನಾ ಅವರನ್ನು ಗೋವರ್ಧನ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಹುಲ್ ಯಾದವ್ ಅವರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿದ್ದು, ತಲಾ 2 ಲಕ್ಷ ಶ್ಯೂರಿಟಿ ಮೇರೆಗೆ ಅವರನ್ನು ಬಿಡುಗಡೆ ಮಾಡಲು ನ್ಯಾಯಾಧೀಶರು ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT