ಕೊಹ್ಲಿ-ತಮನ್ನಾ-ಪ್ರಕಾಶ್ ರಾಜ್ 
ದೇಶ

ಗ್ಯಾಂಬ್ಲಿಂಗ್: ಕೊಹ್ಲಿ, ಗಂಗೂಲಿ, ಪ್ರಕಾಶ್ ರಾಜ್, ತಮನ್ನಾಗೆ ಮದ್ರಾಸ್ ಹೈಕೋರ್ಟ್ ನೋಟಿಸ್!

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಟ-ನಟಿಯರಾದ ಪ್ರಕಾಶ್ ರಾಜ್, ರಾಣಾ ಮತ್ತು ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 

ಚೆನ್ನೈ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಟ-ನಟಿಯರಾದ ಪ್ರಕಾಶ್ ರಾಜ್, ರಾಣಾ ಮತ್ತು ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 

ಆನ್ ಲೈನ್ ಜೂಜಾಟದಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಕೊಹ್ಲಿ, ತಮನ್ನಾ, ಗಂಗೂಲಿ, ರಾಣಾ ಮತ್ತು ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದ್ದು ನವೆಂಬರ್ 19ರೊಳಗೆ ಉತ್ತರಿಸುವಂತೆ ಸೂಚಿಸಿದೆ.

ತಮಿಳುನಾಡಿನಲ್ಲಿ ಜೂಜಾಟಕ್ಕೆ ಬಳಸಿದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೆ ಬರೋಬ್ಬರಿ 9 ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಚೆನ್ನೈ ಮೂಲದ ವ್ಯಕ್ತಿ, ಆನ್‌ಲೈನ್‌ ಜೂಜಾಟದಿಂದ ಯುವಕರು ದಾರಿ ತಪ್ಪುತ್ತಿದ್ದಾರೆ. ಈ ಕಾರಣದಿಂದ ಇಂತಹ ಆಪ್‌ಗಳನ್ನು ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಯುವಕರನ್ನು ಮನಸ್ಸನ್ನು ಆನ್‌ಲೈನ್‌ ಜೂಜಾಟಕ್ಕೆ ಸೆಳೆಯಲು ಕ್ರಿಕೆಟ್ ಖ್ಯಾತನಾಮರನ್ನು ಹಾಗೂ ಸಿನಿಮಾ ನಟ-ನಟಿಯರನ್ನು ಜಾಹೀರಾತುಗಳಲ್ಲಿ ಜೂಜು ಆನ್‌ಲೈನ್‌ ಸಂಸ್ಥೆಗಳು ಬಳಸಿಕೊಳ್ಳುತ್ತಿವೆ.

ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗದಿಂದ ಕಳೆದ ಮಾರ್ಚ್‌ನಿಂದ ಯಾವುದೇ ಕ್ರಿಕೆಟ್‌ ಚಟುವಟಿಕೆಗಳು ನಡೆದಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT