ಅಮಿತ್ ಶಾ 
ದೇಶ

ಅರ್ನಬ್‌ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತಿದೆ: ಗೃಹ ಸಚಿವ ಅಮಿತ್ ಶಾ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಪ್ರಕರಣ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕಾಂಗ್ರೆಸ್ ಮತ್ತು ಅದರ ಮೈತ್ರಿಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ನಾಚಿಕೆಪಡುವಂತೆ ಮಾಡಿವೆ. ರಿಪಬ್ಲಿಕ್ ಟಿವಿ ಮತ್ತು ಗೋಸ್ವಾಮಿ ವಿರುದ್ಧ ಅಧಿಕಾರವನ್ನು ಬಳಸಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ 4ನೇ ಅಂಗದ ಮೇಲೆ ದಾಳಿ ನಡೆಸಲಾಗಿದೆ. ಇದು ತುರ್ತುಪರಿಸ್ಥಿತಿಯನ್ನು ನಮಗೆ ನೆನಪಿಸುತ್ತಿದೆ. ಮುಕ್ತ ಪತ್ರಿಕೆಯ ಮೇಲಿನ ದಾಳಿಯನ್ನು ನಾವು ಖಂಡಿಸಬೇಕು ಮತ್ತು ವಿರೋಧಿಸಬೇಕು” ಎಂದು ಹೇಳಿದ್ದಾರೆ. 

ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿ, “ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಪತ್ರಿಕೋದ್ಯಮವನ್ನು ಎದುರಿಸುವ ರೀತಿ ಇದಲ್ಲ. ಇದು ನಮಗೆ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕೆಯ ಮೇಲೆ ನಡೆಯುತ್ತಿದ್ದ ದಾಳಿಯನ್ನು ನೆನಪಿಸಿಕೊಡುತ್ತದೆ” ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!