ರಾಜನಾಥ್ ಸಿಂಗ್ 
ದೇಶ

ಭಾರತ ತನ್ನ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ರಕ್ಷಿಸಲು ಬದ್ಧ: ರಾಜನಾಥ್ ಸಿಂಗ್

"ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆ"ಯ ಹಿನ್ನೆಲೆಯಲ್ಲಿ ಭಾರತ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ನವದೆಹಲಿ: "ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆ"ಯ ಹಿನ್ನೆಲೆಯಲ್ಲಿ ಭಾರತ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಭಾರತ ಬಯಸುತ್ತದೆ ಮತ್ತು ಗಡಿಯುದ್ದಕ್ಕೂ ಶಾಂತಿಯನ್ನು ಕಾಪಾಡಿಕೊಳ್ಳಲು ವಿವಿಧ ಒಪ್ಪಂದಗಳನ್ನು ಗೌರವಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ರಾಷ್ಟ್ರೀಯ ರಕ್ಷಣಾ ಕಾಲೇಜು ಆಯೋಜಿಸಿದ್ದ ವರ್ಚುವಲ್ ವಿಚಾರ ಸಂಕಿರಣದಲ್ಲಿ ಮತನಾಡಿದ ರಾಜನಾಥ್ ಸಿಂಗ್ ಅವರು. ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆಯ ಹಿನ್ನೆಲೆಯಲ್ಲಿ ಭಾರತವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಸಿದ್ಧ" ಎಂದು ಹೇಳಿದರು.

ಭಾರತವು ಶಾಂತಿ ಪ್ರಿಯ ದೇಶವಾಗಿದ್ದು, ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು ಎಂದು ರಕ್ಷಣಾ ಸಚಿವರು ಹೇಳಿದರು.

ಮೇ 6 ರಿಂದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾಗಿದ್ದು, ಉಭಯ ದೇಶಗಳ ನಡುವಿನ ಸಂಬಂಧ ಗಮನಾರ್ಹವಾಗಿ ಬಿಗಡಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT