ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ಮಮತಾ ಬ್ಯಾನರ್ಜಿ ತಡೆ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಬಡವರು ಹಾಗೂ ಬುಡಕಟ್ಟು ಜನಾಂಗದವರಿಗೆ ಉಪಯೋಗವಾಗುವ ಕೇಂದ್ರ ಸರ್ಕಾರದ ಶೇ.80 ರಷ್ಟು ಯೋಜನೆಗಳಿಗೆ ಮಮತ ಬ್ಯಾನರ್ಜಿ ತಡೆಯೊಡ್ಡಿದ್ದಾರೆ. ಈ ರೀತಿ ಮಾಡುವುದರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ತಡೆಯುತ್ತೇವೆ ಎಂದು ಮಮತಾ ಬ್ಯಾನರ್ಜಿ ಭಾವಿಸಿದ್ದರೆ ಅದು ತಪ್ಪು ಕಲ್ಪನೆ ಎಂದು ಅಮಿತ್ ಶಾ ಮಮತಾ ಬ್ಯಾನರ್ಜಿಗೆ ಸಂದೇಶ ರವಾನೆ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ತೋರುತ್ತಿರುವ ನೀತಿ, ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅಂತ್ಯವನ್ನು ಸೂಚಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಬಡವರಿಗೆ ಸಿಗಬೇಕಿದ್ದ 5 ಲಕ್ಷ ರೂಪಾಯಿವರೆಗಿನ ಸೇವೆಗಳನ್ನು ಪಡೆಯುತ್ತಿಲ್ಲ.ರೈತರಿಗೆ ವರ್ಶಕ್ಕೆ 6,000 ರೂಪಾಯಿಗಳೂ ಲಭ್ಯವಾಗುತ್ತಿಲ್ಲ ಎಂದು ಶಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT