ಕೇಂದ್ರ ಗೃಹ ಸಚಿವ ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿ

ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕೊಲ್ಕತ್ತಾ: ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿಯ ಆಂತರಿಕ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, ಪಕ್ಷವು ತೃಣಮೂಲ ಕಾಂಗ್ರೆಸ್ ನ್ನು ಪದಚ್ಯುತಿಗೊಳಿಸಲು ಹಾಗೂ ಮುಂದಿನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶ್ರಮ ವಹಿಸುವಂತೆ ರಾಜ್ಯ ಘಟಕದ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ಸಂಘಟನೆಯನ್ನು ಬಲಪಡಿಸಲು ಮತ್ತು ಕೇಂದ್ರದ ಜನ ಪರವಾದ ನೀತಿಗಳನ್ನು ಸಾಮಾನ್ಯ ಜನರಿಗೆ ತಿಳಿಸುವಂತೆ ನೋಡಿಕೊಳ್ಳಬೇಕೆಂದು ಅವರು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಹಿಂಸೆಯ ಬಗ್ಗೆ ಕೆಲ ಜನರು ಭಯಭೀತರಾಗಿದ್ದಾರೆ. ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಅಮಿತ್ ಶಾ ಸಭೆಯಲ್ಲಿ ಹೇಳಿದ್ದು, ಮುಂದೆ ಬಿಜೆಪಿ ಸರ್ಕಾರ ರಚನೆಯಾಗಲು ಶ್ರಮ ವಹಿಸುವಂತೆ ತಿಳಿಸಿರುವುದಾಗಿ ರಾಜ್ಯ ಹಿರಿಯ ಮುಖಂಡರೊಬ್ಬರು ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT