ಅಮಿತ್ ಶಾ 
ದೇಶ

ಓಲೈಕೆ ರಾಜಕಾರಣದಿಂದ ಪಶ್ಚಿಮ ಬಂಗಾಳ ಘನತೆಗೆ ಧಕ್ಕೆ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ "ಕಳೆದುಹೋದ ವೈಭವ"ವನ್ನು ಪುನಃಸ್ಥಾಪಿಸುವ ಅವಶ್ಯಕತೆಯಿದೆ ಎಂದು ಒತ್ತಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಪ್ರಸ್ತುತ "ಓಲೈಕೆ ರಾಜಕಾರಣದಿಂದ" ರಾಷ್ಟ್ರದ ಆಧ್ಯಾತ್ಮಿಕ ಪ್ರಜ್ಞೆಯನ್ನು ಎತ್ತಿಹಿಡಿಯುವ ತನ್ನ ಹಳೆಯ ಸಂಪ್ರದಾಯಕ್ಕೆ ಧಕ್ಕೆಯಾಗಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ "ಕಳೆದುಹೋದ ವೈಭವ"ವನ್ನು ಪುನಃಸ್ಥಾಪಿಸುವ ಅವಶ್ಯಕತೆಯಿದೆ ಎಂದು ಒತ್ತಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಪ್ರಸ್ತುತ "ಓಲೈಕೆ ರಾಜಕಾರಣದಿಂದ" ರಾಷ್ಟ್ರದ ಆಧ್ಯಾತ್ಮಿಕ ಪ್ರಜ್ಞೆಯನ್ನು ಎತ್ತಿಹಿಡಿಯುವ ತನ್ನ ಹಳೆಯ ಸಂಪ್ರದಾಯಕ್ಕೆ ಧಕ್ಕೆಯಾಗಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್‌ ಶಾ ಅವರು ಇಂದು ದಕ್ಷಿಣೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, "ಇಡೀ ರಾಜ್ಯ, ದೇಶ ಮತ್ತು ಅದರ ಜನರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸಿದ್ದೇನೆ. (ಪ್ರಧಾನಿ) ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಜಗತ್ತಿನಲ್ಲಿ ತನ್ನ ವೈಭವದ ಸ್ಥಾನವನ್ನು ಉಳಿಸಿಕೊಳ್ಳಬೇಕೆಂದು ನಾವು ಪ್ರಾರ್ಥಿಸಿದ್ದೇವೆ" ಎಂದರು.

ಇದೇ ವೇಳೆ ಪರೋಕ್ಷವಾಗಿ ಪಶ್ಚಿಮ ಬಂಗಾಳದ ದೀದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಓಲೈಕೆ ರಾಜಕಾರಣದಿಂದ ಬಂಗಾಳದ ಅದ್ಭುತ ಸಂಪ್ರದಾಯಕ್ಕೆ ಧಕ್ಕೆಯಾಗಿದೆ. ರಾಜ್ಯದ ವೈಭವವನ್ನು ಮರಳಿ ತರಲು ಬಂಗಾಳದ ಜನರು ಎಚ್ಚೆತ್ತುಕೊಳ್ಳಬೇಕು ಮತ್ತು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ನಾನು ಈ ಮೂಲಕ ಕರೆ ನೀಡುತ್ತೇನೆ" ಎಂದರು.

ಬಂಗಾಳವು ಚೈತನ್ಯ ಮಹಾಪ್ರಭು, ಶ್ರೀ ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳು ಜನಿಸಿದ ನಾಡು. ಈ ರಾಜ್ಯ ಇಡೀ ದೇಶದಲ್ಲಿಯೇ ಆಧ್ಯಾತ್ಮಿಕ ಜಾಗೃತಿಯ ಕೇಂದ್ರವಾಗಿತ್ತು. ಅದನ್ನು ಕಾಪಾಡಿಕೊಂಡು ಹೋಗಬೇಕು ಎಂದರು.

ಇನ್ನು ಕೇಂದ್ರ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಆಡಳಿತರೂಢ ಟಿಎಂಸಿ, ಅಮಿತ್‌ ಶಾ ಅವರು ಆದಿವಾಸಿಗಳ ಮನೆ ತೆರಳಿ ಭೋಜನ ಸೇವಿಸಿರುವುದು ಓಲೈಕೆಯ ರಾಜಕಾರಣವೇ ಹೊರತು ಬೇರೇನೂ ಅಲ್ಲ. ನಾವು ಇಲ್ಲಿ ಎಲ್ಲರೂ ಅನ್ಯೋನ್ಯವಾಗಿ ಇದ್ದೇವೆ. ಅವರು ಆರೋಪಿಸಿರುವಂತೆ ಯಾವು ದೌರ್ಜನ್ಯವೂ ನಡೆಯುತ್ತಿಲ್ಲ ಎಂದು ತಿರುಗೇಟು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT