ಇಂದು ಬೆಳಗ್ಗೆ ಮತಗಟ್ಟೆಗಳಲ್ಲಿ ಕಂಡುಬಂದ ದೃಶ್ಯ 
ದೇಶ

ಬಿಹಾರ ವಿಧಾನಸಭೆ ಚುನಾವಣೆ: ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.19.77ರಷ್ಟು ಮತದಾನ

ಬಿಹಾರ ವಿಧಾನಸಭೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಮುಂದುವರಿದಿದ್ದು, ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇಕಡಾ 19.77ರಷ್ಟು ಮತದಾನವಾಗಿದೆ. 

ಪಾಟ್ನಾ: ಬಿಹಾರ ವಿಧಾನಸಭೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಮುಂದುವರಿದಿದ್ದು, ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇಕಡಾ 19.77ರಷ್ಟು ಮತದಾನವಾಗಿದೆ. 

ಒಟ್ಟು 243 ಕ್ಷೇತ್ರಗಳ ಪೈಕಿ ಇಂದು 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 2.35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಾವಿರದ 204 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಜೆಡಿಯು ಸಂಸದ ಬೈದ್ಯನಾಥ್ ಮಹತೊ ಅವರ ನಿಧನದಿಂದ ತೆರವಾಗಿರುವ ವಾಲ್ಮೀಕಿ ನಗರ ಸಂಸದ ಕ್ಷೇತ್ರಕ್ಕೆ ಸಹ ಇಂದು ಉಪ ಚುನಾವಣೆ ನಡೆಯುತ್ತಿದೆ. 

ಸೀಮಾಂಚಲ ಪ್ರದೇಶಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು ಇಲ್ಲಿ ಈಗ ಮಹಾಘಟಬಂಧನದಿಂದ 14 ಶಾಸಕರು, ಎನ್ ಡಿಎ ಮೈತ್ರಿಕೂಟದ 9 ಮಂದಿ ಮತ್ತು ಎಐಎಂಐಎಂನ ಒಬ್ಬರು ಶಾಸಕರಿದ್ದಾರೆ.  

ಇಂದಿನ ಮತದಾನದಲ್ಲಿ ಮತದಾರರು ಕೋವಿಡ್-19 ಮಧ್ಯೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕೋರಿದ್ದಾರೆ. 

ಇಂದಿನ ಮತದಾನದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ, ಲೋಕತಂತ್ರವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಹಾರ ಜನತೆಗೆ ಮನವಿ ಮಾಡಿದ್ದಾರೆ.

ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಬಿಹಾರಿ ಜನತೆ ಭವಿಷ್ಯದ ಬಗ್ಗೆ ಇಂದು ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿ. ನಿತೀಶ್ ಕುಮಾರ್ ಅವರು ಸುಸ್ತಾಗಿದ್ದು ರಾಜ್ಯವನ್ನು ನಿಭಾಯಿಸಲು ಅಶಕ್ತರಾಗಿದ್ದಾರೆ ಎಂದರು.

ಇಂದಿನ ಮತದಾನದಲ್ಲಿ ಪ್ರಮುಖ ಅಭ್ಯರ್ಥಿಗಳಾದ 12 ಸಚಿವರುಗಳು, ಜೆಡಿಯುನ ಈಗಿನ ಸ್ಪೀಕರ್ ವಿಜಯ್ ಕುಮಾರ್ ಚೌಧರಿ, ಕಾಂಗ್ರೆಸ್ ಅಭ್ಯರ್ಥಿ ಸುಭಾಷಿಣಿ ರಾಜ್ ರಾವ್ ಕೂಡ ಇದ್ದಾರೆ. 

ಮೊದಲ ಹಂತದ ಮತದಾನ ಕಳೆದ ತಿಂಗಳು 28ರಂದು ನಡೆದಿದ್ದು ಶೇಕಡಾ 54ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಎರಡನೇ ಹಂತದ ಮತದಾನ ನವೆಂಬರ್ 3ರಂದು ನಡೆದು ಅದರಲ್ಲಿ ಶೇಕಡಾ 55ರಷ್ಟು ಮತದಾನವಾಗಿದೆ. 

ಈ ಬಾರಿ ಒಟ್ಟು 41 ಸಾವಿರದ 362 ಬೂತ್ ಗಳನ್ನು 18 ಸಾವಿರದ 823 ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿದೆ. 

ಹಿಸುವಾದ ಎರಡು ಮತಗಟ್ಟೆಗಳಲ್ಲಿ ಮರು ಮತದಾನ: ಇಂದು ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಂಡ ನಂತರ ಎರಡು ಮತಗಟ್ಟೆಗಳಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಮತಯಂತ್ರಗಳು ಕೆಟ್ಟುಹೋಗಿ ಎರಡು ಮತಗಟ್ಟೆಗಳಲ್ಲಿ ಮರುಮತದಾನ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT