ಪ್ರಧಾನಿ ನರೇಂದ್ರ ಮೋದಿ 
ದೇಶ

'ಒಂದು ಶ್ರೇಣಿ, ಒಂದು ಪಿಂಚಣಿ' ಐತಿಹಾಸಿಕ ಯೋಜನೆ ಜಾರಿಗೆ ಬಂದ ಮಹತ್ವದ ದಿನ ಇಂದು: ಪ್ರಧಾನಿ ಮೋದಿ 

ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ) ಯೋಜನೆ ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು ಅದರ ಐದನೇ ವರ್ಷಾಚರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ) ಯೋಜನೆ ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು ಅದರ ಐದನೇ ವರ್ಷಾಚರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಯೋಧರು ನಿವೃತ್ತಿ ಹೊಂದಿದ ನಂತರ ಎಲ್ಲರಿಗೂ ಸಮಾನ ಪಿಂಚಣಿ ನೀಡುವ ಯೋದನೆ ಇದಾಗಿದ್ದು ನಮ್ಮ ದೇಶವನ್ನು ರಕ್ಷಿಸುವ ಯೋಧರ ಜೀವನ ಕ್ಷೇಮಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದೆ, 5 ವರ್ಷಗಳು ಕಳೆದಿರುವ ಈ ಸಂದರ್ಭ ಅಭೂತಪೂರ್ವ ಕ್ಷಣ. ದಶಕಗಳಿಂದ ಭಾರತ ದೇಶದ ಯೋಧರು ಈ ಯೋಜನೆಗಾಗಿ ಕಾಯುತ್ತಿದ್ದರು. ನಮ್ಮ ಯೋಧರು ಮತ್ತು ಸೇವೆಯಿಂದ ನಿವೃತ್ತಿ ಹೊಂದಿದವರ ಅಭೂತಪೂರ್ವ ಸೇವೆಗೆ ನನ್ನ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ರಕ್ಷಣಾ ಸಚಿವಾಲಯ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳನ್ನು ಹಂಚಿಕೊಂಡಿದ್ದಾರೆ. ಸೇನೆಯಿಂದ ನಿವೃತ್ತಿ ಹೊಂದಿದ 20.60 ಲಕ್ಷ ನಿವೃತ್ತ ಯೋಧರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸರ್ಕಾರ 10 ಸಾವಿರದ 795.4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ವಾರ್ಷಿಕ ಮರುಕಳಿಸುವ ವೆಚ್ಚ 7 ಸಾವಿರದ 123.38 ಕೋಟಿ ರೂಪಾಯಿಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ