ಭಾರತೀಯ ಯೋಧರು 
ದೇಶ

ಜಮ್ಮು-ಕಾಶ್ಮೀರ: ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಮೂವರು ಉಗ್ರರು ಹತ್ಯೆ 

ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ವಲಯದಲ್ಲಿನ ನಿಯಂತ್ರಣ ರೇಖೆಯಿಂದ ದೇಶದೊಳಗೆ ನುಗ್ಗಲು ಉಗ್ರರು ರಾತ್ರಿಯಲ್ಲಾ ಪ್ರಯತ್ನ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ಬಗ್ಗೆ ವಿವರ ನೀಡಿದ ರಕ್ಷಣಾ ವಕ್ತಾರ ರಾಜೇಶ್ ಕಲಿಯಾ, ಭಾನುವಾರ ಮುಂಜಾನೆ 1 ಗಂಟೆಗೆ ಭದ್ರತಾ ಪಡೆಗಳು ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಲನೆಯನ್ನು ಗಮನಿಸಿವೆ. ಶರಣಾಗುವಂತೆ ಭದ್ರತಾ ಪಡೆಗಳು ಸೂಚಿಸಿದರೂ ಒಳನುಸುಳುಕೋರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ.ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಗುಂಡಿನ ಚಕಮಕಿ ನಡೆದು, ಘಟನೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.

ಹತನಾದ ಉಗ್ರನ ಬಳಿ ಇದ್ದ ಒಂದು ಎಕೆ ರೈಫಲ್ ಮತ್ತು ಎರಡು ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ .ಗುಂಡಿನ ಚಕಮಕಿಯಲ್ಲಿ ಕಾನ್ಸ್ ಟೇಬಲ್ ಸುದೀಪ್ ಸರ್ಕಾರ್  ಹುತಾತ್ಮರಾಗಿದ್ದಾರೆ. ಮುಂದುವರೆದ ಗುಂಡಿನ ಚಕಮಕಿಯಲ್ಲಿ ಇನ್ನೂ ಇಬ್ಬರು ಹತರಾಗಿದ್ದಾರೆ. ಸೇನಾಧಿಕಾರಿ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಕಲಿಯಾ ಹೇಳಿದ್ದಾರೆ. 

ಕಾರ್ಯಾಚರಣೆ ಮುಂದುವರೆದಿದ್ದು, ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!