ಅರ್ನಾಬ್ ಗೋಸ್ವಾಮಿ 
ದೇಶ

ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿ ಸ್ಥಳಾಂತರ! 

ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ  ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಮುಂಬೈ: ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ, ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ  ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ನವೆಂಬರ್ ನಾಲ್ಕರಿಂದ ನ್ಯಾಯಾಂಗ ಬಂಧನದಲ್ಲಿರುವ ಗೋಸ್ವಾಮಿ  ವಿರುದ್ಧದ  ಎಫ್ ಐಆರ್ ನ್ನು ಬಾಂಬೆ ಹೈಕೋರ್ಟ್ ರದ್ದುಪಡಿಸಿದೆ. 

 ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ವಿಚಾರಣಾಧಿಕಾರಿ ಜಮಿಲ್ ಶೇಖ್, ವೋರ್ಲಿಯಲ್ಲಿನ ನಿವಾಸದಲ್ಲಿ ಬುಧವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ನಂತರ ಅವರ ಬಳಿಯಿದ್ದ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿತ್ತು. ಆದಾಗ್ಯೂ. ಇನ್ನೊಂದು ಮೊಬೈಲ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿರುವುದಾಗಿ ಕಂಡುಬಂದಿದೆ ಎಂದರು.

ಕ್ವಾರಂಟೈನ್ ಕೇಂದ್ರದಲ್ಲಿ ಹೇಗೆ ಫೋನ್ ಬಳಸಲು ಅವಕಾಶ ನೀಡಲಾಯಿತು ಎಂಬುದವರ ವರದಿ ನೀಡುವಂತೆ ಅಲಿಬಾಗ್ ಕಾರಾಗೃಹ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಆದ್ದರಿಂದ ಇಂದು ಬೆಳ್ಳಗೆ ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದರು. 

ಈ ಮಧ್ಯೆ ಪೊಲೀಸ್ ಬೆಂಗಾವಲು ವಾಹನದ ಮಧ್ಯೆ ರಿಪಬ್ಲಿಕ್ ಚಾನೆಲ್ ಜೊತೆ ಮಾತನಾಡಿದ ಅರ್ನಾಬ್ ಗೋಸ್ವಾಮಿ, ತನ್ನ ಜೀವನ ಅಪಾಯದಲ್ಲಿದೆ. ಜಾಮೀನು ನೀಡಬೇಕು, ತನ್ನ ಮೇಲೆ ಹಲ್ಲೆ ನಡೆದಿದ್ದು, ವಕೀಲರೊಂದಿಗೆ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಿದರು.

ಒಂದು ವೇಳೆ ಗೋಸ್ವಾಮಿಗೆ ಜಾಮೀನು ನೀಡಿದರೆ ಸಂತ್ರಸ್ಥರ ಕುಟುಂಬವನ್ನು ನಾಶಪಡಿಸುತ್ತಾನೆ. ಗೋಸ್ವಾಮಿ ಈಗಾಗಲೇ ನಾಯಕ್ ಕುಟುಂಬಕ್ಕೆ ಬೆದರಿಕೆ, ಕಿರುಕುಳ ನೀಡಿದ್ದು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರೆಂದು ನಾಯಕ ಕುಟುಂಬ ಪರ ವಾದಿಸುತ್ತಿರುವ ಹಿರಿಯ ವಕೀಲ ಸಿರಿಶ್ ಗುಪ್ಟೆ ಹೇಳಿದ್ದಾರೆ. ಗೋಸ್ವಾಮಿ ಮತ್ತಿತರ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿ ಕುರಿತ ತೀರ್ಪನ್ನು ಬಾಂಬೆ ಹೈಕೋರ್ಟ್ ನಾಳೆ ಪ್ರಕಟಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT