ಭಾರತ-ಚೀನಾ ಗಡಿಯಲ್ಲಿ ಸೇನೆ ನಿಯೋಜನೆ 
ದೇಶ

ಭಾರತ-ಚೀನಾ ಮಧ್ಯೆ ಸದ್ಯದಲ್ಲಿಯೇ 9ನೇ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ: ಕೇಂದ್ರ ಸರ್ಕಾರ 

ಚುಶುಲ್ ನಲ್ಲಿ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 8ನೇ ಸುತ್ತಿನ ಮಾತುಕತೆ ಏರ್ಪಟ್ಟಿದೆ. ಎರಡೂ ಕಡೆಯಿಂದ ಭಾರತ-ಚೀನಾ ಗಡಿ ಪ್ರದೇಶಗಳ ಪಶ್ಚಿಮ ವಲಯದಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯನ್ನು ನಿಷ್ಕ್ರಿಯಗೊಳಿಸುವಿಕೆಯ ಬಗ್ಗೆ ನಿಸ್ಸಂಶಯ, ಆಳವಾದ ಮತ್ತು ರಚನಾತ್ಮಕ ಅಭಿಪ್ರಾಯಗಳ ವಿನಿಮಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ನವದೆಹಲಿ: ಚುಶುಲ್ ನಲ್ಲಿ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 8ನೇ ಸುತ್ತಿನ ಮಾತುಕತೆ ಏರ್ಪಟ್ಟಿದೆ. ಎರಡೂ ಕಡೆಯಿಂದ ಭಾರತ-ಚೀನಾ ಗಡಿ ಪ್ರದೇಶಗಳ ಪಶ್ಚಿಮ ವಲಯದಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯನ್ನು ನಿಷ್ಕ್ರಿಯಗೊಳಿಸುವಿಕೆಯ ಬಗ್ಗೆ ನಿಸ್ಸಂಶಯ, ಆಳವಾದ ಮತ್ತು ರಚನಾತ್ಮಕ ಅಭಿಪ್ರಾಯಗಳ ವಿನಿಮಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯಲ್ಲಿ ಸೇನೆ ನಿಲುಗಡೆಗೆ ಸಂಬಂಧಪಟ್ಟಂತೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಭಾರತ- ಚೀನಾ ದೇಶಗಳು ಮಾತುಕತೆ ಮತ್ತು ಸಂವಹನವನ್ನು ನಿರ್ವಹಿಸಿಕೊಂಡು ಬಂದಿದ್ದು ಅದನ್ನು ಮುಂದುವರಿಸಿಕೊಂಡು ಹೋಗಲು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಇತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಭೆಯಲ್ಲಿ ಒತ್ತು ನೀಡಲಾಯಿತು. ಈ ಮೂಲಕ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಭಾತೃತ್ವವನ್ನು ಜಂಟಿಯಾಗಿ ನಿರ್ವಹಿಸಲು ಸಹಮತ ವ್ಯಕ್ತಪಡಿಸಲಾಯಿತು ಎಂದು ಕೇಂದ್ರ ಸರ್ಕಾರ ಹೇಳಿದೆ.

ಎರಡೂ ದೇಶಗಳ ಮಧ್ಯೆ ಸದ್ಯದಲ್ಲಿಯೇ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಕೂಡ ಕೇಂದ್ರ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT