ದೇಶ

ಜಾಮೀನು ಕೋರಿ ಅಲಿಬಾಗ್‌ ಸೆಷನ್‌ ನ್ಯಾಯಾಲಯದ ಮೊರೆ ಹೋದ ಅರ್ನಬ್

Srinivas Rao BV

ಮುಂಬೈ: ವ್ಯಕ್ತಿಯೋರ್ವನ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅಲಿಬಾಗ್ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ.

ಸೋಮವಾರ ಹೈಕೋರ್ಟ್, ಸಂವಿಧಾನದ ಪರಿಚ್ಛೇದದ 226ರ ಅಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತ್ತು. ಆದರೆ, ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸೂಚಿಸಿತ್ತು. 

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಎಂಬುವರಿಗೆ ಗೋಸ್ವಾಮಿ ಬಾಕಿ ಹಣ ನೀಡಿದ್ದರಿಂದ, ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಮರಣ ಪತ್ರದಲ್ಲಿ ಅರ್ನಬ್ ಅವರ ಹೆಸರು ಉಲ್ಲೇಖಿಸಿದ್ದರಿಂದ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದರು. ಸ್ಥಳೀಯ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

SCROLL FOR NEXT