ಮೃತ ಬಸ್ ಕಂಡಕ್ಟರ್ ತಂದೆ 
ದೇಶ

ವೇತನ ವಿಳಂಬ: ಮಹಾರಾಷ್ಟ್ರ ಬಸ್ ಕಂಡಕ್ಟರ್ ಆತ್ಮಹತ್ಯೆ

ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈ: ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಉದ್ಧವ್ ಠಾಕ್ರೆ ಸರ್ಕಾರ ಕಾರಣ ಎಂದು ಮೃತ ಕಂಡಕ್ಟರ್ ಹೇಳಿರುವುದಾಗಿ ಆತನ ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಲ್ಗಾಂವ್ ಡಿಪೋದಲ್ಲಿ ನಿಯೋಜನೆಗೊಂಡಿದ್ದ ತನ್ನ ಮಗ, ಸಾಲ ಮಾಡಿಕೊಂಡಿದ್ದ, ಆದರೆ, ದೊರೆಯುತ್ತಿದ್ದ ಕಡಿಮೆ ಸಂಬಳದಿಂದ ಸಾಲ ತೀರಿಸಲಾಗಿದೆ ಮೃತಪಟ್ಟಿರುವುದಾಗಿ ಮೃತ ಬಸ್ ಕಂಡಕ್ಟರ್ ತಂದೆ ಅನಿಲ್ ಚೌದರಿ ಹೇಳಿದ್ದಾರೆ.

ಸಂಬಳ ಬಾಕಿ ಇರುವ ನೌಕರರಿಗೆ ಇಂದು ಒಂದು ತಿಂಗಳ ಸಂಬಳ ನೀಡಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ.

ದೀಪಾವಳಿಗೂ ಮುನ್ನ ಎರಡು ತಿಂಗಳ ಸಂಬಳವನ್ನು ಸಾರಿಗೆ ನೌಕರರು ಪಡೆಯುತ್ತಿದ್ದಾರೆ. ಅವರು ನಿರಾಶರಾಗಬೇಕಾಗಿಲ್ಲ, ಆತ್ಮಹತ್ಯೆಯಂತಹ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಸ್ಥಿತಿ ಈಗ ಕೆಟ್ಟದಾಗಿದೆ ಆದರೆ,  ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT