ಮೃತ ಬಸ್ ಕಂಡಕ್ಟರ್ ತಂದೆ 
ದೇಶ

ವೇತನ ವಿಳಂಬ: ಮಹಾರಾಷ್ಟ್ರ ಬಸ್ ಕಂಡಕ್ಟರ್ ಆತ್ಮಹತ್ಯೆ

ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈ: ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಉದ್ಧವ್ ಠಾಕ್ರೆ ಸರ್ಕಾರ ಕಾರಣ ಎಂದು ಮೃತ ಕಂಡಕ್ಟರ್ ಹೇಳಿರುವುದಾಗಿ ಆತನ ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಲ್ಗಾಂವ್ ಡಿಪೋದಲ್ಲಿ ನಿಯೋಜನೆಗೊಂಡಿದ್ದ ತನ್ನ ಮಗ, ಸಾಲ ಮಾಡಿಕೊಂಡಿದ್ದ, ಆದರೆ, ದೊರೆಯುತ್ತಿದ್ದ ಕಡಿಮೆ ಸಂಬಳದಿಂದ ಸಾಲ ತೀರಿಸಲಾಗಿದೆ ಮೃತಪಟ್ಟಿರುವುದಾಗಿ ಮೃತ ಬಸ್ ಕಂಡಕ್ಟರ್ ತಂದೆ ಅನಿಲ್ ಚೌದರಿ ಹೇಳಿದ್ದಾರೆ.

ಸಂಬಳ ಬಾಕಿ ಇರುವ ನೌಕರರಿಗೆ ಇಂದು ಒಂದು ತಿಂಗಳ ಸಂಬಳ ನೀಡಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ.

ದೀಪಾವಳಿಗೂ ಮುನ್ನ ಎರಡು ತಿಂಗಳ ಸಂಬಳವನ್ನು ಸಾರಿಗೆ ನೌಕರರು ಪಡೆಯುತ್ತಿದ್ದಾರೆ. ಅವರು ನಿರಾಶರಾಗಬೇಕಾಗಿಲ್ಲ, ಆತ್ಮಹತ್ಯೆಯಂತಹ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಸ್ಥಿತಿ ಈಗ ಕೆಟ್ಟದಾಗಿದೆ ಆದರೆ,  ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ