ಹಣಕಾಸು ಆಯೋಗದ ವರದಿ ಸಲ್ಲಿಕೆ 
ದೇಶ

ರಾಷ್ಟ್ರಪತಿಗೆ ಹಣಕಾಸು ಆಯೋಗದ ವರದಿ ಸಲ್ಲಿಕೆ

2021-22 ರಿಂದ 2025-26ರ ವರೆಗಿನ ಅವಧಿಯ ‘ಕೋವಿಡ್ ಸಮಯದಲ್ಲಿ ಹಣಕಾಸು ಆಯೋಗ’ ಶೀರ್ಷಿಕೆಯ ಆಯೋಗದ ವರದಿಯನ್ನು ಹಣಕಾಸು ಆಯೋಗದ ಅಧ್ಯಕ್ಷ ಎನ್‍ ಕೆ ಸಿಂಗ್‍ ಸೋಮವಾರ ರಾಷ್ಟ್ರಪತಿ ರಾಮ್‍ನಾಥ್‍ ಕೋವಿಂದ್ ಅವರಿಗೆ ಸಲ್ಲಿಸಿದರು.

ನವದೆಹಲಿ: 2021-22 ರಿಂದ 2025-26ರ ವರೆಗಿನ ಅವಧಿಯ ‘ಕೋವಿಡ್ ಸಮಯದಲ್ಲಿ ಹಣಕಾಸು ಆಯೋಗ’ ಶೀರ್ಷಿಕೆಯ ಆಯೋಗದ ವರದಿಯನ್ನು ಹಣಕಾಸು ಆಯೋಗದ ಅಧ್ಯಕ್ಷ ಎನ್‍ ಕೆ ಸಿಂಗ್‍ ಸೋಮವಾರ ರಾಷ್ಟ್ರಪತಿ ರಾಮ್‍ನಾಥ್‍ ಕೋವಿಂದ್ ಅವರಿಗೆ ಸಲ್ಲಿಸಿದರು.

ಆಯೋಗದ ಸದಸ್ಯರಾದ ಅಜಯ್ ನಾರಾಯಣ್ ಜಾ, ಪ್ರೊಫೆಸರ್ ಅನೂಪ್ ಸಿಂಗ್, ಡಾ.ಅಶೋಕ್ ಲಾಹಿರಿ ಮತ್ತು ಡಾ.ರಮೇಶ್ ಚಂದ್, ಆಯೋಗದ ಕಾರ್ಯದರ್ಶಿ ಅರವಿಂದ್ ಮೆಹ್ತಾ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 2021-22 ರಿಂದ 2025-26 ವರೆಗೆ ಐದು ವರ್ಷಗಳವರೆಗಿನ ಅವಧಿಗೆ ಶಿಫಾರಸ್ಸುಗಳನ್ನು  ಅ 30 ರೊಳಗೆ ನೀಡಲು ಆಯೋಗಕ್ಕೆ ಆದೇಶಿಸಲಾಗಿತ್ತು.

ಕಳೆದ ವರ್ಷ, ಆಯೋಗ ಸಲ್ಲಿಸಿದ್ದ 2020-21ನೇ ಸಾಲಿನ ಶಿಫಾರಸುಗಳನ್ನು ಒಳಗೊಂಡ ತನ್ನ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು. ವರದಿಯನ್ನು 2020 ರ ಜ 30 ರಂದು ಸಂಸತ್ತಿನಲ್ಲಿ ಮಂಡಿಸಿತ್ತು. ವಿಶಿಷ್ಟ ಮತ್ತು ವ್ಯಾಪಕ ವಿಷಯಗಳ ಕುರಿತು ತನ್ನ ಶಿಫಾರಸುಗಳನ್ನು ನೀಡುವಂತೆ ಆಯೋಗಕ್ಕೆ ಸರ್ಕಾರ  ಸೂಚಿಸಿತ್ತು. ತೆರಿಗೆ ಹಂಚಿಕೆ, ಸ್ಥಳೀಯ ಸರ್ಕಾರದ ಅನುದಾನ, ವಿಪತ್ತು ನಿರ್ವಹಣಾ ಅನುದಾನದ ಹೊರತಾಗಿ, ವಿದ್ಯುತ್ ಕ್ಷೇತ್ರ, ನೇರ ಹಣ ವರ್ಗಾವಣೆ ಅಳವಡಿಸಿಕೊಳ್ಳುವುದು, ಘನತ್ಯಾಜ್ಯ ನಿರ್ವಹಣೆ ಮುಂತಾದ ಹಲವು ಕ್ಷೇತ್ರಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆ ಪ್ರೋತ್ಸಾಹಿಸುವ ಕುರಿತು ಶಿಫಾರಸು  ಮಾಡುವಂತೆಯೂ ಆಯೋಗಕ್ಕೆ ಸೂಚಿಸಲಾಗಿತ್ತು. ರಕ್ಷಣಾ ಮತ್ತು ಆಂತರಿಕ ಭದ್ರತೆಗೆ ನಿಧಿ ಒದಗಿಸಲು ಪ್ರತ್ಯೇಕ ಕಾರ್ಯವಿಧಾನವನ್ನು ಸ್ಥಾಪಿಸಬೇಕೇ ಎಂಬ ಕುರಿತು ಪರಿಶೀಲಿಸಲು ಆಯೋಗವನ್ನು ಕೇಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT