ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ 
ದೇಶ

ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರ

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ  ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ  ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಮತ ಎಣಿಕೆ ಕಾರ್ಯದ ಆರಂಭದಲ್ಲಿ ತೇಜಸ್ವಿ ಯಾದವ್ ರ ಮಹಾಘಟ್ ಬಂಧನ್ ಮುನ್ನಡೆ ಪಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಬಿಹಾರದ ಆಡಳಿತಾರೂಢ ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹಾಲಿ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿಗೆ ಕೋವಿಡ್ ಕಾರಣ ಎಂದು ಹೇಳಿಕೆ ನೀಡಿದ್ದಾರೆ.

'ನಾವು ಜನರ ನಿರ್ಧಾರ ಸ್ವಾಗತಿಸುತ್ತೇವೆ. ನಾವು ತೇಜಸ್ವಿ ಯಾದವ್ ಅಥವಾ ಆರ್‌ಜೆಡಿಯಿಂದ ಸೋಲಲಿಲ್ಲ. ಆದರೆ ದೇಶಕ್ಕೆ ಅಂಟಿದ ಶಾಪದಿಂದ (ಕೋವಿಡ್) ಸೋತೆವು' ಎಂದು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಅಂತೆಯೇ 'ಬಿಹಾರದಲ್ಲಿ ಕಳೆದ 70 ವರ್ಷಗಳಿಂದ ಏನೆಲ್ಲಾ  ಆಗಿತ್ತೋ ಅದಕ್ಕೆ ನಾವು ಬೆಲೆ ತೆತ್ತಿದ್ದೇವೆ. ಕೋವಿಡ್ ಕಾರಣದಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕೆ ಆರಂಭವಾದ ಕ್ಷಣದಿಂದ ಸ್ಪಷ್ಟ ಮುನ್ನಡೆ ಸಾಧಿಸಿದ್ದ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇದೀ ಎನ್‌ಡಿಎ ಯಶಸ್ವಿಯಾಗಿ ತಿರುಗೇಟು ನೀಡುತ್ತಿದೆ. ಇತ್ತೀಚಿನ ವರದಿಗಳು ಬಂದಾಗ ಎನ್ ಡಿಎ ಮೈತ್ರಿಕೂಟ 125 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾಘಟ್ ಬಂಧನ್ 102  ಕ್ಷೇತ್ರಗಳಳ್ಲಿ ಮುನ್ನಡೆ ಸಾಧಿಸಿದೆ. ಚಿರಾಗ್ ಪಾಸ್ವಾನ್ ರ ಎಲ್ ಜೆಪಿ 7 ಕ್ಷೇತ್ರಗಳಲ್ಲಿ ಮತ್ತು ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

SCROLL FOR NEXT