ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ 
ದೇಶ

ಗುಜರಾತ್ ಉಪ ಚುನಾವಣೆ: ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಮುಂದಿನ ಚುನಾವಣೆಯ ಟ್ರೇಲರ್ ಇದು ಎಂದ ಸಿಎಂ ವಿಜಯ್ ರೂಪಾನಿ!

ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಗಾಂಧಿನಗರ: ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಗುಜರಾತ್ ನ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಎಲ್ಲ ಎಂಟೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಅಬ್ದುಸಾ, ಕರ್ಜನ್, ಮೊರ್ಬಿ, ಗಡಾಡಾ, ಧಾರಿ, ಲಿಂಬ್ಡಿ, ಕಪ್ರಡಾ ಮತ್ತು ಡ್ಯಾಂಗ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.  ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಕಾರ್ಯ ಆರಂಭವಾಗಿದ್ದು, 8 ಕ್ಷೇತ್ರಗಳಿಂದ 81 ಅಭ್ಯರ್ಥಿಗಳು ಹಾಲಿ ಚುನಾವಣಾ ಕಣದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 

ಗೆಲುವು ನಮ್ಮದೇ, ಮುಂದಿನ ಚುನಾವಣೆಯ ಟ್ರೈಲರ್ ಇದು: ಸಿಎಂ ರೂಪಾನಿ
ಇನ್ನು ಅತ್ತ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ಬೆನ್ನಲ್ಲೇ ಈ ಕುರಿತು ಗಾಂಧಿನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ವಿಜಯ್ ರೂಪಾನಿ, ಎಲ್ಲ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿದ್ದಾರೆ. ಎಲ್ಲರೂ ಜಯ ಗಳಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ. ಹಾಲಿ ಉಪ  ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ಟ್ರೈಲರ್ ಆಗಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವರ್ಷದ ಜೂನ್‌ನಲ್ಲಿ ನಡೆದ ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರ ಗುಜರಾತ್‌ನಲ್ಲಿ ಉಪಚುನಾವಣೆ ಅಗತ್ಯವಾಗಿತ್ತು. ಈ ಪೈಕಿ ಐವರು ಶಾಸಕರು ನಂತರ ಆಡಳಿತಾರೂಢ ಬಿಜೆಪಿಗೆ ಸೇರಿದರು, ಇದೀಗ 2017 ರ ಚುನಾವಣೆಯಲ್ಲಿ ಅವರು ಗೆದ್ದ ಅದೇ  ಸ್ಥಾನಗಳಿಂದ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT