ಜೆಡಿಯು ಬೆಂಬಲಿಗರು 
ದೇಶ

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೆ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ: ಜೆಡಿಯು

ಮುಖ್ಯಮಂತ್ರಿ ನಿತೀಶ್‌ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್‌ ಸಿಂಗ್‌ ಹೇಳಿದ್ದಾರೆ. 

ಪಾಟ್ನಾ: ಮುಖ್ಯಮಂತ್ರಿ ನಿತೀಶ್‌ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್‌ ಸಿಂಗ್‌ ಹೇಳಿದ್ದಾರೆ. 


ಚುನಾವಣಾ ಫಲಿತಾಂಶದ ಟ್ರೆಂಡ್ ನೋಡಿ ಮಾತನಾಡಿದ ಅವರು ‘ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ’ ಎಂದು ಹೇಳಿದರು.

ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್‌ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು. 

ರಾಜ್ಯದಲ್ಲಿ ಎನ್‌ಡಿಎ ಜಯ ಸಾಧಿಸಿದರೆ ನಿತೀಶ್‌ಕುಮಾರ್‌ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು. 126 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 73 ಜೆಡಿಯು 47  ಮತ್ತು ವಿಐಪಿ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT