ಜೆಡಿಯು ಬೆಂಬಲಿಗರು 
ದೇಶ

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೆ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ: ಜೆಡಿಯು

ಮುಖ್ಯಮಂತ್ರಿ ನಿತೀಶ್‌ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್‌ ಸಿಂಗ್‌ ಹೇಳಿದ್ದಾರೆ. 

ಪಾಟ್ನಾ: ಮುಖ್ಯಮಂತ್ರಿ ನಿತೀಶ್‌ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್‌ ಸಿಂಗ್‌ ಹೇಳಿದ್ದಾರೆ. 


ಚುನಾವಣಾ ಫಲಿತಾಂಶದ ಟ್ರೆಂಡ್ ನೋಡಿ ಮಾತನಾಡಿದ ಅವರು ‘ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ’ ಎಂದು ಹೇಳಿದರು.

ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್‌ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು. 

ರಾಜ್ಯದಲ್ಲಿ ಎನ್‌ಡಿಎ ಜಯ ಸಾಧಿಸಿದರೆ ನಿತೀಶ್‌ಕುಮಾರ್‌ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು. 126 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 73 ಜೆಡಿಯು 47  ಮತ್ತು ವಿಐಪಿ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT