ತೇಜ್ ಪ್ರತಾಪ್, ತೇಜಸ್ವಿ ಯಾದವ್ 
ದೇಶ

ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ: ಫಲಿತಾಂಶದ ಟ್ರೆಂಡ್ ತಿರಸ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಆಡಳಿತರೂಢ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಸರ್ಕಾರ ರಚಿಸುವ ಅವಕಾಶ ಇದೆ. ಹೀಗಾಗಿ ಸದ್ಯದ ಟ್ರೆಂಡ್‌ ಹೊರತಾಗಿಯೂ ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ ಎಂದು ಆರ್‌ಜೆಡಿ ವಿಶ್ವಾಸ ವ್ಯಕ್ತಪಡಿಸಿದೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಆಡಳಿತರೂಢ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಸರ್ಕಾರ ರಚಿಸುವ ಅವಕಾಶ ಇದೆ. ಹೀಗಾಗಿ ಸದ್ಯದ ಟ್ರೆಂಡ್‌ ಹೊರತಾಗಿಯೂ ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ ಎಂದು ಆರ್‌ಜೆಡಿ ವಿಶ್ವಾಸ ವ್ಯಕ್ತಪಡಿಸಿದೆ

ನಮ್ಮ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರಿಂದ ದೊರೆತಿರುವ ಮಾಹಿತಿ ಪ್ರಕಾರ ಮಹಾಘಟಬಂಧನ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಆರ್‌ಜೆಡಿ ಹೇಳಿದೆ.

ಸಂಜೆ 8 ಗಂಟೆ ವರೆಗಿನ ಮಾಹಿತಿ ಪ್ರಕಾರ ಎನ್‌ಡಿಎ ಸ್ವಲ್ಪ ಮುನ್ನಡೆ ಸಾಧಿಸಿದೆ. ಆದರೆ ಸ್ಪಷ್ಟ ಬಹುಮತ ಪಡೆದಿಲ್ಲ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಸಹ ತೀವ್ರ ಪೈಪೋಟಿ ನೀಡುತ್ತಿದೆ.

‘ಎಲ್ಲ ಪ್ರದೇಶಗಳಲ್ಲಿರುವ ನಮ್ಮ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳ ಸಂಪರ್ಕದಲ್ಲಿದ್ದೇವೆ. ಅವರಿಂದ ದೊರೆತ ಮಾಹಿತಿ ಪ್ರಕಾರ, ಫಲಿತಾಂಶ ನಮ್ಮ ಪರ ಬರಲಿದೆ’ ಎಂದು ಆರ್‌ಜೆಡಿ ಟ್ವೀಟ್ ಮಾಡಿದೆ.

‘ಮಹಾಘಟಬಂಧನ ಸರ್ಕಾರ ರಚನೆಯಾಗುವುದು ನಿಶ್ಚಿತ. ಬಿಹಾರ ಬದಲಾವಣೆ ಬಯಸಿದೆ’ ಎಂದು ಆರ್‌ಜೆಡಿ ಹೇಳಿದೆ.

ಎಣಿಕೆ ಪ್ರಕ್ರಿಯೆ ಮುಗಿಯುವ ವರೆಗೂ ಮತ ಎಣಿಕೆ ಕೇಂದ್ರಗಳಲ್ಲಿಯೇ ಇರುವಂತೆ ಅಭ್ಯರ್ಥಿಗಳಿಗೆ ಮತ್ತು ಏಜೆಂಟ್‌ಗಳಿಗೆ ಪಕ್ಷವು ಸೂಚಿಸಿದೆ.

ಈ ಬಾರಿ ಶೇ 63ರಷ್ಟು ಎಲೆಕ್ಟ್ರಾನಿಕ್ ಮತ ಯಂತ್ರಗಳ ಸಂಖ್ಯೆ ಏರಿಕೆಯಾದ ಕಾರಣ, ತಡರಾತ್ರಿಯವರೆಗೂ ಮತ ಎಣಿಕೆ ಕಾರ್ಯ ಮುಂದುವರಿಯಲಿದೆ ಎಂದು ಚುನಾವಣಾ ಆಯುಕ್ತರು ಮಧ್ಯಾಹ್ನವೇ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT