ತೇಜಶ್ವಿ ಯಾದವ್ 
ದೇಶ

ಬಿಹಾರ ಚುನಾವಣೆ: 'ತೇಜಶ್ವಿ ಯಾದವ್' ಮ್ಯಾನ್ ಆಫ್ ದಿ ಮ್ಯಾಚ್ ಎಂದ ಸಂಜಯ್ ರೌತ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಶ್ವಿ ಯಾದವ್ ಅವರು "ಮ್ಯಾನ್ ಆಫ್ ದಿ ಮ್ಯಾಚ್" ಆಗಿ ಹೊರಹೊಮ್ಮಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ "ಪ್ರಮುಖ ಪಾತ್ರ" ವಹಿಸಲಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಅವರು ಬುಧವಾರ ಆರ್ ಜೆಡಿ ನಾಯಕನನ್ನು ಶ್ಲಾಘಿಸಿದ್ದಾರೆ.

ಮುಂಬೈ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಶ್ವಿ ಯಾದವ್ ಅವರು "ಮ್ಯಾನ್ ಆಫ್ ದಿ ಮ್ಯಾಚ್" ಆಗಿ ಹೊರಹೊಮ್ಮಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ "ಪ್ರಮುಖ ಪಾತ್ರ" ವಹಿಸಲಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಅವರು ಬುಧವಾರ ಆರ್ ಜೆಡಿ ನಾಯಕನನ್ನು ಶ್ಲಾಘಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರೌತ್, ಬಿಹಾರದಲ್ಲಿ ಮುಂದಿನ ಎನ್‌ಡಿಎ ಸರ್ಕಾರದ ಸ್ಥಿರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

"ಎನ್ ಡಿಎಗೆ ಬಹುಮತ ಅತ್ಯಂತ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷ- ಜೆಡಿಯು ಮೂರನೇ ಸ್ಥಾನದಲ್ಲಿದೆ ಮತ್ತು ಈ ಗೆಲುವನ್ನು ಸಂಭ್ರಮಿಸುವುದು ತಮಾಷೆಯಾಗಿದೆ. ಬಿಜೆಪಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಆದರೆ ಅದಕ್ಕಾಗಿ ಅವರು ಬಹಳಷ್ಟು ರಾಜಕೀಯ ಕಾರ್ಯತಂತ್ರ ರೂಪಿಸಿದ್ದರು" ಶಿವಸೇನಾ ನಾಯಕ ಹೇಳಿದ್ದಾರೆ.

"ಹೊಸ ಸರ್ಕಾರದ ಸ್ಥಿರತೆಗಾಗಿ ಯಾರೂ ಭರವಸೆ ನೀಡಲಾರರು. ಬಿಜೆಪಿ ನಿತೀಶ್ ಕುಮಾರ್ ಅವರ ರೆಕ್ಕೆಗಳನ್ನು ಕತ್ತರಿಸಲು ಬಯಸಿತ್ತು ಮತ್ತು ಇದಕ್ಕಾಗಿ ಚಿರಾಗ್ ಪಾಸ್ವಾನ್ ಅವರನ್ನು ಬಳಸಿಕೊಂಡಿದೆ" ಎಂದು ಆರೋಪಿಸಿದ್ದಾರೆ.

ತೇಜಶ್ವಿ ಯಾದವ್ ಅವರು ಮುಖ್ಯಮಂತ್ರಿಯಾಗಲು ಸಾಧ್ಯವಾಗದಿದ್ದರೂ, ಅವರು ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದ್ದಾರೆ ಎಂದು ರೌತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT