ಮೋದಿ 
ದೇಶ

ಕುಟುಂಬ ರಾಜಕಾರಣ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ: ಪ್ರಧಾನಿ ಮೋದಿ

ಕುಟುಂಬ ನಡೆಸುವ ಪಕ್ಷಗಳಿಂದ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಮತ್ತು ರಾಷ್ಟ್ರೀಯ ಪಕ್ಷ ಕೂಡ ಅದರಿಂದ ಹೊರತಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಲಿದ್ದಾರೆ.

ನವದೆಹಲಿ: ಕುಟುಂಬ ನಡೆಸುವ ಪಕ್ಷಗಳಿಂದ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಮತ್ತು ರಾಷ್ಟ್ರೀಯ ಪಕ್ಷ ಕೂಡ ಅದರಿಂದ ಹೊರತಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಲಿದ್ದಾರೆ. 

ಬಿಹಾರ ಚುನಾವಣೆ ಮತ್ತು ವಿವಿಧ ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಎಂದು ಹೇಳಿದರು. 

ಬಿಹಾರ ಮತ್ತು ದೇಶಾದ್ಯಂತದ ಇತರ ಉಪಚುನಾವಣೆಗಳಲ್ಲಿನ ಸಮೀಕ್ಷೆಯ ಫಲಿತಾಂಶಗಳು ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮಾತ್ರ ಮತದಾರರು ಬೆಂಬಲಿಸುತ್ತಾರೆ ಎಂದು ಮೋದಿ ಹೇಳಿದರು.

"21ನೇ ಶತಮಾನದಲ್ಲಿ ಅಭಿವೃದ್ಧಿ ಮಾತ್ರ ರಾಷ್ಟ್ರೀಯ ರಾಜಕಾರಣದ ಆಧಾರವಾಗಲಿದೆ ಎಂದು ಜನರು ನಿರ್ಧರಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಹೋರಾಡಲು ಸಾಧ್ಯವಾಗದವರು ಪಕ್ಷದ ಕಾರ್ಯಕರ್ತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ ಎಂದು ಮೋದಿ ಆರೋಪಿಸಿದರು. 

ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ದೇಶದ ಜನರನ್ನು ಶ್ಲಾಘಿಸಿದ ಪ್ರಧಾನಿ, ಚುನಾವಣಾ ಆಯೋಗ, ಭದ್ರತಾ ಪಡೆ ಮತ್ತು ಆಡಳಿತವನ್ನು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಶ್ಲಾಘಿಸಿದರು.

ದೇಶಾದ್ಯಂತ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸನ್ನು ಉಲ್ಲೇಖಿಸಿ, ಈ ಫಲಿತಾಂಶಗಳು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ವಿಸ್ತರಿಸಿದೆ ಎಂದರು. 

"ಬಡವರು, ದಲಿತರು, ವಂಚಿತರು ತಮ್ಮ ಪ್ರಾತಿನಿಧ್ಯವನ್ನು ನೋಡುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿ. ಪ್ರತಿ ವಿಭಾಗ, ಪ್ರದೇಶದ ಅಗತ್ಯವನ್ನು ಬಿಜೆಪಿ ಮಾತ್ರ ಅರ್ಥಮಾಡಿಕೊಳ್ಳುತ್ತದೆ. ಮತದಾನದ ಫಲಿತಾಂಶಗಳು ನಾವು ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ರೀತಿಯನ್ನು ಅನುಮೋದಿಸಿವೆ ಎಂದು ಅವರು ಹೇಳಿದರು.

ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವ 'ಸೈಲೆಂಟ್ ಮತದಾರರು' ದೇಶಾದ್ಯಂತ ಮಹಿಳೆಯರು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT