ಮೋದಿ 
ದೇಶ

ಕುಟುಂಬ ರಾಜಕಾರಣ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ: ಪ್ರಧಾನಿ ಮೋದಿ

ಕುಟುಂಬ ನಡೆಸುವ ಪಕ್ಷಗಳಿಂದ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಮತ್ತು ರಾಷ್ಟ್ರೀಯ ಪಕ್ಷ ಕೂಡ ಅದರಿಂದ ಹೊರತಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಲಿದ್ದಾರೆ.

ನವದೆಹಲಿ: ಕುಟುಂಬ ನಡೆಸುವ ಪಕ್ಷಗಳಿಂದ ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಮತ್ತು ರಾಷ್ಟ್ರೀಯ ಪಕ್ಷ ಕೂಡ ಅದರಿಂದ ಹೊರತಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಲಿದ್ದಾರೆ. 

ಬಿಹಾರ ಚುನಾವಣೆ ಮತ್ತು ವಿವಿಧ ಉಪಚುನಾವಣೆಗಳಲ್ಲಿ ಬಿಜೆಪಿ ವಿಜಯದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಎಂದು ಹೇಳಿದರು. 

ಬಿಹಾರ ಮತ್ತು ದೇಶಾದ್ಯಂತದ ಇತರ ಉಪಚುನಾವಣೆಗಳಲ್ಲಿನ ಸಮೀಕ್ಷೆಯ ಫಲಿತಾಂಶಗಳು ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮಾತ್ರ ಮತದಾರರು ಬೆಂಬಲಿಸುತ್ತಾರೆ ಎಂದು ಮೋದಿ ಹೇಳಿದರು.

"21ನೇ ಶತಮಾನದಲ್ಲಿ ಅಭಿವೃದ್ಧಿ ಮಾತ್ರ ರಾಷ್ಟ್ರೀಯ ರಾಜಕಾರಣದ ಆಧಾರವಾಗಲಿದೆ ಎಂದು ಜನರು ನಿರ್ಧರಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಹೋರಾಡಲು ಸಾಧ್ಯವಾಗದವರು ಪಕ್ಷದ ಕಾರ್ಯಕರ್ತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ ಎಂದು ಮೋದಿ ಆರೋಪಿಸಿದರು. 

ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ದೇಶದ ಜನರನ್ನು ಶ್ಲಾಘಿಸಿದ ಪ್ರಧಾನಿ, ಚುನಾವಣಾ ಆಯೋಗ, ಭದ್ರತಾ ಪಡೆ ಮತ್ತು ಆಡಳಿತವನ್ನು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಶ್ಲಾಘಿಸಿದರು.

ದೇಶಾದ್ಯಂತ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸನ್ನು ಉಲ್ಲೇಖಿಸಿ, ಈ ಫಲಿತಾಂಶಗಳು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ವಿಸ್ತರಿಸಿದೆ ಎಂದರು. 

"ಬಡವರು, ದಲಿತರು, ವಂಚಿತರು ತಮ್ಮ ಪ್ರಾತಿನಿಧ್ಯವನ್ನು ನೋಡುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿ. ಪ್ರತಿ ವಿಭಾಗ, ಪ್ರದೇಶದ ಅಗತ್ಯವನ್ನು ಬಿಜೆಪಿ ಮಾತ್ರ ಅರ್ಥಮಾಡಿಕೊಳ್ಳುತ್ತದೆ. ಮತದಾನದ ಫಲಿತಾಂಶಗಳು ನಾವು ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ರೀತಿಯನ್ನು ಅನುಮೋದಿಸಿವೆ ಎಂದು ಅವರು ಹೇಳಿದರು.

ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವ 'ಸೈಲೆಂಟ್ ಮತದಾರರು' ದೇಶಾದ್ಯಂತ ಮಹಿಳೆಯರು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT