ಪ್ರಧಾನಿ ನರೇಂದ್ರ ಮೋದಿ 
ದೇಶ

ಅಭಿವೃದ್ಧಿಯೇ ಮತದಾರರ ಆದ್ಯತೆಯಾಗಿರುತ್ತದೆ ಎಂದು ಬಿಹಾರ ಚುನಾವಣೆ ತೋರಿಸಿಕೊಟ್ಟಿದೆ: ಪ್ರಧಾನಿ ನರೇಂದ್ರ ಮೋದಿ 

ಅಭಿವೃದ್ಧಿಪರ ಕೆಲಸಗಳನ್ನು ಮಾಡಲು ಬಿಹಾರ ಜನತೆ ಮತ್ತೊಂದು ಅವಕಾಶ ನೀಡಿದ್ದಾರೆ ಎಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ಅಭಿವೃದ್ಧಿಪರ ಕೆಲಸಗಳನ್ನು ಮಾಡಲು ಬಿಹಾರ ಜನತೆ ಮತ್ತೊಂದು ಅವಕಾಶ ನೀಡಿದ್ದಾರೆ ಎಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆಯ ಮತದಾನ ಫಲಿತಾಂಶ ಹೊರಬಿದ್ದ ನಂತರ ಆಡಳಿತಾರೂಢ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ 122 ಸ್ಥಾನಗಳು ಮತ್ತು ವಿರೋಧ ಪಕ್ಷ ಮಹಾಘಟಬಂಧನಕ್ಕೆ 113 ಸ್ಥಾನಗಳು ಬಂದಿವೆ.

ಇಡೀ ವಿಶ್ವಕ್ಕೆ ಬಿಹಾರ ಪ್ರಜಾಪ್ರಭುತ್ವದ ಮೊದಲ ಪಾಠ ಕಲಿಸಿದೆ. ಇಂದು ಮತ್ತೆ ಬಿಹಾರ ಜಗತ್ತಿಗೆ ಪ್ರಜಾಪ್ರಭುತ್ವವನ್ನು ಹೇಗೆ ಬಲಪಡಿಸಬಹುದು ಎಂದು ಹೇಳಿದೆ. ದಾಖಲೆಯ ಸಂಖ್ಯೆಯಲ್ಲಿ ರಾಜ್ಯದ ಬಡವರು, ನಿರ್ಗತಿಕರು ಮತ್ತು ಮಹಿಳೆಯರು ಮತ ಚಲಾಯಿಸಿದ್ದು ಅಭಿವೃದ್ಧಿಪರ ನಿರ್ಣಾಯಕ ತೀರ್ಪನ್ನು ನೀಡಿದ್ದಾರೆ ಎಂದು ಹಿಂದಿಯಲ್ಲಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಗ್ರಾಮಗಳಲ್ಲಿನ ಬಡವರು, ರೈತರು, ಕಾರ್ಮಿಕರು, ವ್ಯಾಪಾರಿಗಳು, ಅಂಗಡಿ ಮಾಲೀಕರು ಮತ್ತು ಪ್ರತಿ ವರ್ಗದವರು ಎನ್ ಡಿಎ ಮಂತ್ರವಾದ ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮೇಲೆ ನಂಬಿಕೆಯಿಟ್ಟಿದ್ದಾರೆ. ಪ್ರತಿ ವ್ಯಕ್ತಿಯ, ಪ್ರತಿ ಪ್ರದೇಶದ ಸಮಾನ ಅಭಿವೃದ್ಧಿಗೆ ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT