ತೇಜಸ್ವಿ ಯಾದವ್ 
ದೇಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಯಾದವ್,  ಜೆಡಿಯು ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದು, ಒಂದು ವೇಳೆ ಅವರಿಗೆ ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಬೇಕು ಎಂದರು.

ಮಹಾಘಟ ಬಂಧನ್ ಕ್ಕಿಂತಲೂ ಕೇವಲ 12, 270 ಹೆಚ್ಚಿನ ಮತಗಳು ಹಾಗೂ 15 ಕ್ಕೂ ಹೆಚ್ಚಿನ ಸ್ಥಾನಗಳನ್ನು  ಎನ್ ಡಿಎ ಮೈತ್ರಿಕೂಟ ಗಳಿಸಿರುವುದು ಅಶ್ಚರ್ಯಕರವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು. 

ಚುನಾವಣಾ ಪ್ರಕ್ರಿಯೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆರ್ ಜೆಡಿ ನಾಯಕ, ಆರಂಭದಲ್ಲಿ ಎಣಿಕೆ ಕಾರ್ಯ ಮಾಡದೆ ಕೊನೆಯಲ್ಲಿ ಮಾಡಲಾದ ಎಲ್ಲಾ ಕ್ಷೇತ್ರಗಳ ಅಂಚೆ ಮತಗಳನ್ನು ಮರು ಎಣಿಕೆ ಮಾಡಬೇಕೆಂದು ಒತ್ತಾಯಿಸಿದರು.

ಕಡಿಮೆ ಅಂತರದಲ್ಲಿ ನಾವು ಚುನಾವಣೆಯಲ್ಲಿ ಸೋತಿದ್ದೇವೆ. ಅನೇಕ ಕ್ಷೇತ್ರಗಳಲ್ಲಿ 900ಕ್ಕೂ ಹೆಚ್ಚು ಅಂಚೆ ಮತಗಳನ್ನು ಅಮಾನ್ಯ ಮಾಡಲಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು - ಪರಮೇಶ್ವರ

ಧರ್ಮಸ್ಥಳ ಪ್ರಕರಣ: ದಕ್ಷಿಣ ಕನ್ನಡದಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!

'ತೆಗ್ದು ತಿ**** ಇಟ್ಕೋ..': ಪಾಕ್ ವೇಗಿ Haris Rauf ವಿವಾದಿತ ಸನ್ಹೆಗೆ ಮುಟ್ಟಿ ನೋಡಿಕೊಳ್ಳುವ ತಿರುಗೇಟು ಕೊಟ್ಟ Arshdeep Singh

"ಚೀನಾದಿಂದ ಸರ್ಕಾರ ಕೆಡವಲು ಯತ್ನ; ಪರಿಸ್ಥಿತಿ ಕೈಮೀರುವ ಮುನ್ನ ಭಾರತ ಎಚ್ಚೆತ್ತುಕೊಳ್ಳಬೇಕು"

Biggboss ಸ್ಪರ್ಧಿ Rithu Video Leaked: ನನ್ನ ಗಂಡನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ; ವಿಡಿಯೋ ಹರಿಬಿಟ್ಟ ನಟ ಧರ್ಮ ಪತ್ನಿ!

SCROLL FOR NEXT