ವರವರ ರಾವ್ 
ದೇಶ

ವರವರ ರಾವ್‌ಗೆ ಮತ್ತೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್, ಖಾಸಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದೇಶ

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಮತ್ತೆ ಜಾಮೀನು ನಿರಾಕರಿಸಿದೆ.

ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಮತ್ತೆ ಜಾಮೀನು ನಿರಾಕರಿಸಿದೆ.

ಜಾಮೀನು ಕೋರಿ ವರವರ ರಾವ್ ಅವರ ಪತ್ನಿ ಹೇಮಲತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಎಕೆ ಮೆನೋನ್ ನೇತೃತ್ವದ ವಿಭಾಗೀಯ ಪೀಠ, ಆರೋಪಿಗೆ ಈ ಸಮಯದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಆದರೆ ಖಾಸಗಿ ಆಸ್ಪತ್ರೆಯ ವೈದ್ಯರ ತಂಡದಿಂದ ಜೈಲಿನಲ್ಲಿರುವ ವರವರ ರಾವ್ ಅವರ ಆರೋಗ್ಯ ತಪಾಸಣೆ ನಡೆಸುವಂತೆ ಆದೇಶಿಸಿದೆ.

ವರವರ ರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆಯ ಅವಶ್ಯಕತೆಯಿದೆ. ಹೀಗಾಗಿ ಈ ಕೂಡಲೇ ಅವರಿಗೆ ಜಾಮೀನು ನೀಡಬೇಕೆಂದು ಹೇಮಲತಾ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದ್ದರು.

ಆದರೆ ಈ ಮನವಿಯನ್ನು ತಳ್ಳಿ ಹಾಕಿದ ನ್ಯಾಯಾಧೀಶರು, ವೈದ್ಯರು ವಿಡಿಯೋ ಕಾನ್ಫರೆನ್ಸ್ ಮೂಲಕ ವರವರ ರಾವ್ ಆರೋಗ್ಯ ವಿಚಾರಣೆ ನಡೆಸಬಹುದಾಗಿದ್ದು, ಜಾಮೀನು ನೀಡುವ ಅಬಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಇಂದೇ ವರವರ ರಾವ್ ಆರೋಗ್ಯ ವಿಚಾರಣೆ ನಡೆಸುವಂತೆ ಸೂಚಿಸಿದ ನ್ಯಾಯಾಧೀಶರು, ನ.17ರಂದು ನ್ಯಾಯಾಲಯ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ಮತ್ತೊಮ್ಮೆ ಮಾಹಿತಿ ಪಡೆಯಲಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT