ರಾಹುಲ್ ಗಾಂಧಿ 
ದೇಶ

ಬಿಜೆಪಿ ಆಡಳಿತದಲ್ಲಿ ಪತ್ರಿಕೋದ್ಯಮದ ಕತ್ತು ಹಿಸುಕಲಾಗುತ್ತಿದೆ: ರಾಹುಲ್‌ ಗಾಂಧಿ

ಅಸ್ಸಾಂನಲ್ಲಿ ಪತ್ರಕರ್ತ ಪರಾಗ್‌ ಭುಯಾನ್‌ ಹತ್ಯೆಗೆ ಸಂಬಂಧಿಸದಿಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಸದೆ ಬಡಿಯಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ನವದೆಹಲಿ: ಅಸ್ಸಾಂನಲ್ಲಿ ಪತ್ರಕರ್ತ ಪರಾಗ್‌ ಭುಯಾನ್‌ ಹತ್ಯೆಗೆ ಸಂಬಂಧಿಸದಿಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಸದೆ ಬಡಿಯಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಇಂದು ಈ ಬಗ್ಗೆ  ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, "ಬಿಜೆಪಿ ನಾಯಕರ ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತರನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಕ್ಕೆ ತನ್ನ ಸಂತಾಪಗಳು. ಇದು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶವಿರಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ" ಎಂದಿದ್ದಾರೆ.

ಎರಡು ದಿನಗಳ ಹಿಂದೆ ಕೂಡ ಈ ವಿಷಯ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಪತ್ರಕರ್ತ ವಿನಯ್‌ ತಿವಾರಿ ವಿರುದ್ಧ ಬಿಜೆಪಿ ಗೂಂಡಾಗಳು ತೀವ್ರ ಹಲ್ಲೆ ನಡೆಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕುಗಳು ಕೇವಲ ಆಯ್ದ ವ್ಯಕ್ತಿಗಳಿಗೆ ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಷ್ಟೇ ಅಸ್ಸಾಂ ಪತ್ರಕರ್ತ ಪರಾಗ್ ಭುಯಾನ್ ಅವರು ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿದ್ದು, ಇದು ಕೊಲೆ ಎಂದು ಆರೋಪಿಸಲಾಗುತ್ತಿದೆ. ಈ ಅಸ್ಸಾಂ ಸರ್ಕಾರ ತನಿಖೆಗೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT